Webdunia - Bharat's app for daily news and videos

Install App

ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ: ಆರ್‌ ಅಶೋಕ್ ಕಿಡಿ

Sampriya
ಗುರುವಾರ, 7 ನವೆಂಬರ್ 2024 (16:14 IST)
Photo Courtesy X
ಬೆಂಗಳೂರು: "ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ" ಎನ್ನುವಂತೆ ಈ "ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ" ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಅವರು ವ್ಯಾಸಂಗ ಮಾಡಿದ್ದ ಸರ್ಕಾರಿ ಶಾಲೆಯನ್ನೂ ವಕ್ಫ್‌ ಹೆಸರಿಗೆ ಪರಭಾರೆ ಮಾಡಿರುವ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. "ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ" ಎನ್ನುವಂತೆ ಈ "ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ" ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ.

ಔರಂಗಜೇಬ್, ಟಿಪ್ಪು ಸುಲ್ತಾನ್ ಅಪರಾವತಾರದಂತಿರುವ ಈ ಕಾಂಗ್ರೆಸ್ ಸರ್ಕಾರವನ್ನ ಹೀಗೆ ಬಿಟ್ಟರೆ ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನು ವಕ್ಫ್ ಆಸ್ತಿ ಎನ್ನುತ್ತೆ, ವಿಶ್ವೇಶ್ವರಯ್ಯನವರು ಕಟ್ಟಿದ ಕನ್ನಂಬಾಡಿ ಕಟ್ಟೆಯೂ ವಕ್ಫ್ ಆಸ್ತಿ ಆಗುತ್ತದೆ. ಅಣ್ಣ ಬಸವಣ್ಣನವರ ಅನುಭವ ಮಂಟಪವೂ ವಕ್ಫ್ ಆಸ್ತಿ ಆಗುತ್ತೆ, ಕೆಂಪೇಗೌಡರು ಕಟ್ಟಿದ ಬೆಂಗಳೂರು ವಕ್ಫ್ ಆಸ್ತಿ ಆಗುತ್ತೆ.

ಸ್ವಾಮಿ ಸಿದ್ದರಾಮಯ್ಯ ನವರೇ, ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನ ಈ ಕೂಡಲೇ ಸಂಪುಟದಿಂದ ವಜಾ ಮಾಡಿ. ಇಲ್ಲವಾದರೆ ಇಡೀ ಕರ್ನಾಟಕ ವಕ್ಫ್ ಆಸ್ತಿ ಆಗುವ ದಿನ ದೂರವಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments