ಬೆಂಗಳೂರು: ಧರ್ಮಸ್ಥಳ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕೆಂದು ಬಿಜೆಪಿ ನಾಯಕ, ಎಂಎಲ್ಸಿ ರವಿಕುಮಾರ್ ಆಗ್ರಹ ಮಾಡಿದ್ದಾರೆ.
ಧರ್ಮಸ್ಥಳ ಕೇಸ್ನಲ್ಲಿ ಬುರುಡೆ ಗ್ಯಾಂಗ್ ಸುಳ್ಳು ಹೇಳಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ ಮಾಡಿರುವ ಎಲ್ಲರೂ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ್ದರು. ಪ್ರೀಂಕೋರ್ಟ್ ಅವರ ಅರ್ಜಿ ವಜಾ ಮಾಡಿತ್ತು. ಕೋರ್ಟ್ಗೆ ಅರ್ಜಿ ಹಾಕಿರೋರಿಗೆ ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ.
ಬುರುಡೆ ಗ್ಯಾಂಗ್ನ ಅರ್ಜಿಯನ್ನು ವಜಾ ಮಾಡಿದ್ರು ರಾಜ್ಯ ಸರ್ಕಾರ ಮಾತ್ರ ಅದನ್ನು ಎಸ್ಐಟಿಗೆ ವಹಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪಿಗೆ ರಾಜ್ಯ ಸರ್ಕಾರ ಈ ರೀತಿ ನಡೆದುಕೊಳ್ಳುವುದಾ ಎಂದು ಆಕ್ರೋಶ ಹೊರಹಾಕಿದರು.
ಧರ್ಮಸ್ಥಳದ ವಿರುದ್ಧದ ಪ್ರಕರಣದಲ್ಲಿ ಎಸ್ಐಟಿ ತನಿಖೆಯಲ್ಲಿ ಏನೂ ಸಿಕ್ಕಿಲ್ಲ. ಇದೀಗ ಸರ್ಕಾರ, ಸುಪ್ರೀಂ ಕೋರ್ಟ್ ಆದೇಶವೇ ಗೊತ್ತಿಲ್ಲ ಅಂತ ಜಾಣ ನಡೆ ತೋರಿಸುತ್ತಿದೆ.
ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಮುಂದೆ ಬೆತ್ತಲೆ ಆಗಿದೆ. ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ಕೊಡಬೇಕು.
ಸುಪ್ರೀಂಕೋರ್ಟ್ ತೀರ್ಪು ಇದ್ದರೂ ಹೇಗೆ ತನಿಖೆ ಮಾಡಿದ್ರಿ ಅಂತ ಸರ್ಕಾರ ಉತ್ತರ ಕೊಡಬೇಕು.
ಸಿದ್ದರಾಮಯ್ಯ ಸರ್ಕಾರಕ್ಕೆ ಬುದ್ಧಿ ಭ್ರಮಣೆ ಆಗಿದೆ. ಸಿದ್ದರಾಮಯ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.