ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ

Webdunia
ಬುಧವಾರ, 22 ಡಿಸೆಂಬರ್ 2021 (08:19 IST)
ಬೆಳಗಾವಿ : ಪ್ರತಿಪಕ್ಷಗಳ ತೀವ್ರ ವಿರೋಧದ, ಗದ್ದಲದ ನಡುವೆಯೂ ಮಂಗಳವಾರ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಗಳವಾರ ಮಂಡಿಸಲಾಯಿತು.

ಭೋಜನ ನಂತರ ಕಲಾಪದ ಬಳಿಕ ವಿಧೇಯಕವನ್ನು ದಿಢೀರ್ ವಿಧೇಯಕ ಮಂಡಿಸಲಾಗಿದೆ. ಕಾಂಗ್ರೆಸ್ ವಿರೋಧಿಸುತ್ತಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಸೂದೆ ಮಂಡಿಸಲು ಮುಂದಾದರು. ಈ ವೇಳೆ ಮಸೂದೆ ಮಂಡನೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಹಕ್ಕು-2021 ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಹೆಚ್ಚುವರಿ ಕಾರ್ಯಸೂಚಿಯಲ್ಲಿ ಮಸೂದೆ ಮಂಡನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಚರ್ಚೆ ಮಾಡಿ ಎಂದು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಚರ್ಚೆ ಮಾಡಿ ಮೊದಲು ಎಂದು ಮನವಿ ಮಾಡಿದರು.

ಆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕದ್ದು ಮುಚ್ಚಿ ಮಸೂದೆ ಯಾಕೆ ಮಾಡಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಶಿವಕುಮಾರ್ ಮಾತು ವಾಪಸ್ ತೆಗೆದುಕೊಳ್ಳಬೇಕು. ಕದ್ದುಮುಚ್ಚಿ ಮಾಡಿಲ್ಲ, ಅಜೆಂಡಾದಲ್ಲಿ ತಂದೇ ಮಾಡಿರುವುದು ಎಂದ ಸ್ಪೀಕರ್ ಪ್ರತ್ಯುತ್ತರ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments