Webdunia - Bharat's app for daily news and videos

Install App

ವಯನಾಡು ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಪಶ್ಚಿಮ ಘಟ್ಟ ಉಳಿವಿಗೆ ದಿಟ್ಟ ಕ್ರಮ

Sampriya
ಶುಕ್ರವಾರ, 2 ಆಗಸ್ಟ್ 2024 (18:27 IST)
Photo Courtesy X
ಬೆಂಗಳೂರು: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್‌ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಅದರಂತೆ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನೂ ಪಶ್ಚಿಮ ಘಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.  ಈ ಸಂಬಂಧ ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

ಈಚೆಗೆ ಭಾರೀ ಮಳೆಗೆ ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11ಮಂದಿ ಸಾವನ್ನಪ್ಪಿದ್ದರು. ಇನ್ನೂ ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ200ಮಂದಿ ಸಾವನ್ನಪ್ಪಿದ್ದು 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ದುರಂತಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಕ್ರಮ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments