Webdunia - Bharat's app for daily news and videos

Install App

ರಾಜ್ಯಕ್ಕೆ ಅನ್ಯಾಯವಾದಾಗ ಬೊಮ್ಮಾಯಿ ಯಾವ ಬಿಲದಲ್ಲಿದ್ದರು: ದಿನೇಶ್ ಗುಂಡೂರಾವ್ ವ್ಯಂಗ್ಯ

Sampriya
ಸೋಮವಾರ, 29 ಜುಲೈ 2024 (10:45 IST)
Photo Courtesy X
ಬೆಂಗಳೂರು: ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗದೆ ಅನ್ಯಾಯ ಎಸಗಿದ್ದಾರೆ ಎನ್ನುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುವ ಯಾವ ಬಿಲದಲ್ಲಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಮುಖ್ಯ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಸಂಬಂಧ ದಿನೇಶ್ ಗುಂಡೂರಾವ್ ಅವರು ಆಕ್ರೋಶ ಹೊರಹಾಕಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

ಈಗ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತಾಡುವ ಬೊಮ್ಮಾಯಿಯವರು ಬಜೆಟ್‌ನಲ್ಲಿ ಕರ್ನಾಟಕದ ಪ್ರಸ್ತಾಪವೇ ಮಾಡದಿದ್ದಾಗ ಯಾವ ಬಿಲದಲ್ಲಿ ಅಡಗಿಕೊಂಡಿದ್ದರು‌.

19 ಜನ ಸಂಸದ 5 ಜನ ಕೇಂದ್ರ ಸಚಿವರೂ ಇದ್ದರೂ ಬಜೆಟ್‌ನಲ್ಲಿ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಬಿಜೆಪಿ ಜೆಡಿಎಸ್ ನಾಯಕರ ನಾಲಗೆಯೇ ಹೊರಳಲಿಲ್ಲ.

ಮೋದಿ ಸರ್ಕಾರ ಕರ್ನಾಟಕಕ್ಕೆ ನಿರಂತರ ಅನ್ಯಾಯ ಎಸಗುತ್ತಿದೆ. ಅದರ ಬಗ್ಗೆ ಮಾತಾಡುವ ತಾಕತ್ತಿಲ್ಲದೆ, ನೀತಿ ಸಭೆಗೆ ಹಾಜರಾಗದಿರುವುದರಿಂದ ಅನ್ಯಾಯ ಆಯಿತು ಎಂದು ಬಡಬಡಿಸುವುದು ಹಾಸ್ಯಾಸ್ಪದ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments