ರಾಜ್ಯಕ್ಕೆ ಅನ್ಯಾಯವಾದಾಗ ಬೊಮ್ಮಾಯಿ ಯಾವ ಬಿಲದಲ್ಲಿದ್ದರು: ದಿನೇಶ್ ಗುಂಡೂರಾವ್ ವ್ಯಂಗ್ಯ

Sampriya
ಸೋಮವಾರ, 29 ಜುಲೈ 2024 (10:45 IST)
Photo Courtesy X
ಬೆಂಗಳೂರು: ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗದೆ ಅನ್ಯಾಯ ಎಸಗಿದ್ದಾರೆ ಎನ್ನುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುವ ಯಾವ ಬಿಲದಲ್ಲಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಮುಖ್ಯ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಸಂಬಂಧ ದಿನೇಶ್ ಗುಂಡೂರಾವ್ ಅವರು ಆಕ್ರೋಶ ಹೊರಹಾಕಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

ಈಗ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತಾಡುವ ಬೊಮ್ಮಾಯಿಯವರು ಬಜೆಟ್‌ನಲ್ಲಿ ಕರ್ನಾಟಕದ ಪ್ರಸ್ತಾಪವೇ ಮಾಡದಿದ್ದಾಗ ಯಾವ ಬಿಲದಲ್ಲಿ ಅಡಗಿಕೊಂಡಿದ್ದರು‌.

19 ಜನ ಸಂಸದ 5 ಜನ ಕೇಂದ್ರ ಸಚಿವರೂ ಇದ್ದರೂ ಬಜೆಟ್‌ನಲ್ಲಿ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಬಿಜೆಪಿ ಜೆಡಿಎಸ್ ನಾಯಕರ ನಾಲಗೆಯೇ ಹೊರಳಲಿಲ್ಲ.

ಮೋದಿ ಸರ್ಕಾರ ಕರ್ನಾಟಕಕ್ಕೆ ನಿರಂತರ ಅನ್ಯಾಯ ಎಸಗುತ್ತಿದೆ. ಅದರ ಬಗ್ಗೆ ಮಾತಾಡುವ ತಾಕತ್ತಿಲ್ಲದೆ, ನೀತಿ ಸಭೆಗೆ ಹಾಜರಾಗದಿರುವುದರಿಂದ ಅನ್ಯಾಯ ಆಯಿತು ಎಂದು ಬಡಬಡಿಸುವುದು ಹಾಸ್ಯಾಸ್ಪದ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋದಣಿಯಾಗದಿರುವ ಆರ್‌ಎಸ್‌ಎಸ್‌ ಭೂಗತ ಸಂಘಟನೆಯಲ್ಲವೇ: ಬಿಕೆ ಹರಿಪ್ರಸಾದ್‌

ದೇಶದ ಈ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಭಾರೀ ಮಳೆ, ಇಂಧು ಆರೆಂಜ್ ಅಲರ್ಟ್ ಘೋಷಣೆ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments