Webdunia - Bharat's app for daily news and videos

Install App

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಛೇರಿ ಉದ್ಘಾಟನೆ

Webdunia
ಗುರುವಾರ, 15 ಡಿಸೆಂಬರ್ 2022 (18:11 IST)
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಕಾಂಕ್ಷಿ ಮಾಜಿ ಉಪಮಹಾಪೌರರಾದ ಬಿ.ಎಸ್.ಪುಟ್ಟರಾಜುರವರ ಬಸವೇಶ್ವರನಗರದಲ್ಲಿ ಜನ ಸಂಪರ್ಕ ಕಛೇರಿ ಉದ್ಘಾಟನೆ ಸಮಾರಂಭ.
 
ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು,ಶಾಸಕರಾದ ದಿನೇಶ್ ಗುಂಡೂರಾವ್ ರವರು,ಮಾಜಿ ಉಪಮಹಾಪೌರರಾದ ಬಿ.ಎಸ್.ಪುಟ್ಟರಾಜುರವರು ಉದ್ಘಾಟನೆ ಮಾಡಿದರು.
 
ಮಾಜಿ ಉಪಮಹಾಪೌರರು, ಕಾಂಗ್ರೆಸ್ ಪಕ್ಷದ ಅಕಾಂಕ್ಷಿ ಬಿ.ಎಸ್.ಪುಟ್ಟರಾಜುರವರು ಮಾತನಾಡಿ ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ,ಉಪಮಹಾಪೌರನಾಗಿ ಬೆಂಗಳೂರುನಗರ ಅಭಿವೃದ್ದಿಗೆ ಶ್ರಮಿಸಿದ್ದೇನೆ.
 
 ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆ ಮತ್ತು ಕುಂದುಕೂರತೆ ಅಲಿಸಲು ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಜನಸಂಪರ್ಕ ಕಛೇರಿ ಆರಂಭಿಸಲಾಗಿದೆ.
 
ಕಾಂಗ್ರೆಸ್ ಪಕ್ಷ ಬಡವರ,ದೀನದಲಿತರ ಪರ ಹೋರಾಟ ಮಾಡುವ ಪಕ್ಷ.
ಕರ್ನಾಟಕದಲ್ಲಿ ಯುವ ನಾಯಕ ರಾಹುಲ್ ಗಾಂಧಿರವರು ಭಾರತಜೋಡೋ ಪಾದಯಾತ್ರೆಯಿಂದ ಹೊಸ ಹುರಪು ಮೂಡಿದೆ.
 
ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಹಾಗೂ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿರವರ  ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಸಧೃಡವಾಗಿದೆ.
 
ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಜನತೆಗೆ ನೀಡಿದ 165ಭರವಸೆಗಳನ್ನು ಈಡೇರಿಸಿದ ದೇಶದ ಮೊಟ್ಟ ಮೊದಲ ಸರ್ಕಾರ ಕಾಂಗ್ರೆಸ್ ಪಕ್ಷದ ಸರ್ಕಾರ.
 
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಾಯಕ ಸಿದ್ದಾಂತವನ್ನು ಪರಿಪಾಲಿಸುವ ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಮನಸ್ಸಿನಿ ಹಲವಾರು ಯೋಜನೆಗಳನ್ನು ಆನುಷ್ಠಾನಗೊಳಿಸಿ ಬಡವರ ಪಾಲಿಗೆ ಆಶಾಕಿರಣವಾಯಿತು.
 
ಕಾಂಗ್ರೆಸ್ ಪಕ್ಷ ರಾಜಾಜಿನಗರ ಉತ್ತಮ ಸಂಘಟನೆಯಿಂದ ಕೂಡಿದೆ.2023ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಿ ಬರಲಿದೆ ಎಂದು ಹೇಳಿದರು.
 
 
ಮಾಜಿ ಶಾಸಕ ಬಾಲಕೃಷ್ಣ,ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಜಿ.ಕೃಷ್ಣಮೂರ್ತಿ,ಶ್ರೀಮತಿ ಮಂಜುಳ ವಿಜಯಕುಮಾರ್,ಮುರುಳಿ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments