Webdunia - Bharat's app for daily news and videos

Install App

SDM ಕ್ಷೇಮವನ ಉದ್ಘಾಟನೆ : ವಿಶೇಷತೆಗಳೇನು?

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:44 IST)
ಬೆಂಗಳೂರು : ನೆಲಮಂಗಲದಲ್ಲಿ ನಿರ್ಮಾಣ ಆಗಿರುವ   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನವನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. 20 ಎಕರೆ ವಿಶಾಲವಾದ ಜಾಗದಲ್ಲಿ ಕ್ಷೇಮವನ ನಿರ್ಮಾಣವಾಗಿದ್ದು, ಸಂಪೂರ್ಣ ಪ್ರಕೃತಿ ಚಿಕಿತ್ಸೆ ಇಲ್ಲಿ ಸಿಗಲಿದೆ.

ವಿಶೇಷತೆ ಏನು?

20 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿದೆ ಕ್ಷೇಮವನ. ನಿಸರ್ಗದತ್ತ ಪುನರುಜ್ಜೀವನ ಸೌಲಭ್ಯಗಳು ಇಲ್ಲಿ ಇವೆ. ಈ ಕೇಂದ್ರದ ವಿನ್ಯಾಸವನ್ನ ತಜ್ಞ ಮಹೇಶ್ ಡಿಯೋಫೋಡೆ ಮಾಡಿದ್ದಾರೆ. ಪರಿಕಲ್ಪನೆ ವಿನ್ಯಾಸವನ್ನ ಆಯುಷ್ ಕಾಸ್ಲಿವಾಲ್ ಅವರು ಮಾಡಿದ್ದಾರೆ.

ಪ್ರಾಚೀನ ವಾಸ್ತು ವಿನ್ಯಾಸಗಳಿಗೆ ಅನುಗುಣವಾದ ಬಣ್ಣ, ವಿನ್ಯಾಸ ಮತ್ತು ಸಂರಚನೆಗಳು ರೂಪುಗೊಂಡಿದೆ.

ಆಮೆ, ನಂದಿ, ಗರುಡ ಸಂಕೇತಿಸುವ ವಿನ್ಯಾಸದ ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಸಮುದ್ರ, ಭೂಮಿ, ಮತ್ತು ಆಕಾಶ ತತ್ವದ ನೆಲೆಯಲ್ಲಿ ಸಂರಚಿತವಾಗಿದೆ. 

ಯೋಗ, ಧ್ಯಾನಕ್ಕೆ ವಿನೂತನ ಕಟ್ಟಡ ʼಕೂರ್ಮಾʼ ನಿರ್ಮಾಣ ಮಾಡಲಾಗಿದೆ. ಕೇಂದ್ರವು ಎಸಿ ಈಜುಕೊಳದ ಸೌಲಭ್ಯ ಒಳಗೊಂಡಿದೆ. ಕೂರ್ಮಾವತಾರದ ಪೌರಾಣಿಕ ಪರಿಕಲ್ಪನೆಯಲ್ಲಿ ಈ ಕಟ್ಟಡ ಅರಳಿದೆ. ನಂದಿ ಹೆಸರಿನ ಕಟ್ಟಡ ಶಾಖೆ ಊಟದ ವಿಭಾಗವಾಗಿದೆ. ಡಯಟ್ ಮಾದರಿಗಳು 25 ಬಗೆಯ ಥೆರಪಿ ಶುಶ್ರೂಷಾ ಕ್ರಮಗಳನ್ನು ಒಳಗೊಂಡಿದೆ.

ಕ್ಷೇಮವನ 400 ಜನರಿಗೆ ಶುಶ್ರೂಷೆ ನೀಡಬಲ್ಲದು. 86 ವಿಶೇಷ ಕೊಠಡಿಗಳು, 30 ಡಿಲಕ್ಸ್ ವಿಂಗ್ ಗಳು ಇವೆ.16 ಕಾಟೇಜ್ ಗಳು ಇವೆ. ನಿಸರ್ಗ, ಮೌನ ಮತ್ತು ಸರಳತೆ ಕೇಂದ್ರೀಕರಿಸಿಕೊಂಡ ಜೈವಿಕ ಮೌಲಿಕತೆಯನ್ನ ಈ ಕೇಂದ್ರ ಬಿಂಬಿಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments