Webdunia - Bharat's app for daily news and videos

Install App

ನಿಲ್ಲದ ಕ್ರೈಂ : ಬೆಚ್ಚಿಬಿದ್ದ ಮಹಾನಗರ - ತಡರಾತ್ರಿ ಅಲ್ಲಿ ಆಗಿದ್ದೇನು?

Webdunia
ಸೋಮವಾರ, 30 ಸೆಪ್ಟಂಬರ್ 2019 (17:03 IST)
ಧಾರವಾಡ ಶೂಟೌಟ್ ಪ್ರಕರಣ ‌ಮಾಸುವ ಬೆನ್ನಲ್ಲೇ  ತಡರಾತ್ರಿ ಮತ್ತೊಂದು ಚಾಕು ಇರಿತಕ್ಕೆ ಯುವಕನೋರ್ವ  ಅಸುನೀಗಿದ್ದು ಮಹಾನಗರದ ಜನತೆ ಮತ್ತೆ ಬೆಚ್ಚಿಬೀಳುಸುವಂತೆ ಮಾಡಿದೆ.

ಧಾರವಾಡದ ಮಣಕಿಲ್ಲಾ ನಿವಾಸಿ ಮಹ್ಮದ್ ಜುಬೇರ  ತಂದೆ ಜಾಫರ್  ಮಕಾನದಾರ (18)  ಎಂಬಾತನೇ ದುಷ್ಕರ್ಮಿಗಳ ಚಾಕು ಇರಿತಕ್ಕೆ ಅಸುನೀಗಿದ ಯುವಕನಾಗಿದ್ದಾನೆ.

ತಡರಾತ್ರಿ ನಗರದ ನಿಜಾಮುದ್ದೀನ್  ಕಾಲನಿ ಬಳಿ ಮೂವರು ಕ್ಷುಲ್ಲಕ ಕಾರಣಕ್ಕೆ  ಚಾಕು ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು,  ಸ್ಥಳದಲ್ಲಿಯೇ  ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ  ಜುಬೇರನನ್ನು   ತಕ್ಷಣವೇ ಸಮೀಪದ  ಧಾರವಾಡ ಜಿಲ್ಲಾ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜುಬೇರ ಸಾವನ್ನಪ್ಪಿದ್ದಾನೆ. 

ಈ ಕುರಿತು  ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಲೆಗೆ ಪೊಲೀಸರು ಬಲೆ ಬೀಸಿದ್ದಾರೆ.
 ಹುಬ್ಬಳ್ಳಿ-ಧಾರವಾಡ ಅವಳಿನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ  ಗಣೇಶ ಚತುರ್ಥಿಯಿಂದ  8 ಚಾಕು  ಇರಿತ ಪ್ರಕರಣಗಳಲ್ಲಿ ನಾಲ್ವರು,   ಶೂಟೌಟ್ ನಿಂದ   ಇಬ್ಬರು ಸಾವನ್ನಪ್ಪಿದ್ದಾರೆ.     ಅಪರಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು,  ಜನರು ಪ್ರಾಣಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 ಹುಬ್ಬಳ್ಳಿ-ಧಾರವಾಡ ಪೊಲೀಸರು  ದಿನನಿತ್ಯ ರೌಡಿಗಳ ಮನೆ ಮೇಲೆ ದಾಳಿ ನಡೆಸುತ್ತಿದ್ದು,  ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರಲ್ಲದೆ  ಪ್ರಕರಣ ದಾಖಲಿಸಿ  ಬಿಸಿ ತಾಕಿಸಿ ಎಚ್ಚರಿಸಿದ್ದಾರೆ. ಅಪರಾಧಗಳ ಸಂಖ್ಯೆ ಹೆಚ್ಚುತ್ತಲಿದ್ದು  ಪೊಲೀಸರು  ನಿದ್ದೆಗೆಡಿಸುವಂತೆ ಮಾಡಿದ್ದು, ಪ್ರಕರಣಗಳ ಕಡಿವಾಣ ಸವಾಲಿನ ಸಾಹಸವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments