Select Your Language

Notifications

webdunia
webdunia
webdunia
webdunia

ಹಾಲಿನ ಪ್ರೋತ್ಸಾಹ ಧನ ಹೆಚ್ಚಳ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

ಹಾಲಿನ ಪ್ರೋತ್ಸಾಹ ಧನ ಹೆಚ್ಚಳ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ
ಬೆಳಗಾವಿ , ಬುಧವಾರ, 6 ನವೆಂಬರ್ 2019 (09:00 IST)
ಬೆಳಗಾವಿ : ಹಾಲಿನ ಪ್ರೋತ್ಸಾಹ ಧನ ಹೆಚ್ಚಿಸುವುದಾಗಿ ಕೆಎಂಎಫ್ ನ ನೂತನ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡುವುದರ ಮೂಲಕ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.




ಕೆಎಂಎಫ್ ನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲಬಾರಿಗೆ ಕೆಎಂಎಫ್ ನ ಕಚೇರಿಗೆ ಆಗಮಿಸಿದ ಬಾಲಚಂದ್ರ ಜಾರಕಿಹೊಳಿ, ರೈತರು ಗುಣಮಟ್ಟದ ಹಾಲು ನೀಡಿದರೆ ಪ್ರತಿ ಲೀಟರ್ ಗೆ ನೀಡುತ್ತಿದ್ದ 5 ರೂ ಪ್ರೋತ್ಸಾಹ ಧನವನ್ನು 6ರೂ.ಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ರೈತರ ಸೇವೆ ಮಾಡಲು ಸಚಿವ ಸ್ಥಾನ ಬಿಟ್ಟು ಕೆಎಂಎಫ್ ಅಧ್ಯಕ್ಷನಾಗಿದ್ದೇನೆ. ಕೆಎಂಎಫ್ ನಲ್ಲಿ ಅನೇಕ ಸಮಸ್ಯೆಗಳಿದ್ದು, ಎಲ್ಲವನ್ನೂ ಸರಿಪಡಿಸಲಾಗುವುದು. ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶದಲ್ಲಿ ಕಿಡ್ನಿ ಕಸಿ ಮಾಡಿಕೊಳ್ಳಲು ಬಿಲ್ ಕುಲ್ ಒಪ್ಪಿರಲಿಲ್ಲವಂತೆ ಸುಷ್ಮಾ ಸ್ವರಾಜ್! ಕಾರಣವೇನು ಗೊತ್ತಾ?