Publish Date: Fri, 06 Mar 2026 (18:27 IST)
Updated Date: Fri, 06 Mar 2026 (18:39 IST)
ಉಡುಪಿ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಣಿಪಾಲದ ಡಿಸಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ನಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಯಾವುದೇ ಸಂಭಾವ್ಯ ನೀರಿನ ಕೊರತೆಯನ್ನು ಎದುರಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವರದಿಯಾಗಿಲ್ಲ ಎಂದು ಡಿಸಿ ಹೇಳಿದರು.
ತಾಲೂಕುವಾರು ವರದಿಗಳ ಪ್ರಕಾರ ಮೇ 15ರ ವರೆಗೆ ಸಾಕಷ್ಟು ನೀರು ಪೂರೈಕೆಯಾಗುತ್ತಿದ್ದು, ಯಾವುದೇ ಕೊರತೆ ಉಂಟಾದರೆ ನಿರಂತರ ನೀರು ಪೂರೈಕೆಗೆ ಪೂರ್ವಭಾವಿ ಯೋಜನೆಗಳನ್ನು ಸಿದ್ಧಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಜಾಗೃತರಾಗಿ ಮತ್ತು ಕ್ರಿಯಾಶೀಲರಾಗಿರಲು ಅವರು ಸೂಚಿಸಿದರು.