ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

Sampriya
ಶುಕ್ರವಾರ, 6 ಮಾರ್ಚ್ 2026 (18:27 IST)
ಉಡುಪಿ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದ ಡಿಸಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಯಾವುದೇ ಸಂಭಾವ್ಯ ನೀರಿನ ಕೊರತೆಯನ್ನು ಎದುರಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವರದಿಯಾಗಿಲ್ಲ ಎಂದು ಡಿಸಿ ಹೇಳಿದರು. 

ತಾಲೂಕುವಾರು ವರದಿಗಳ ಪ್ರಕಾರ ಮೇ 15ರ ವರೆಗೆ ಸಾಕಷ್ಟು ನೀರು ಪೂರೈಕೆಯಾಗುತ್ತಿದ್ದು, ಯಾವುದೇ ಕೊರತೆ ಉಂಟಾದರೆ ನಿರಂತರ ನೀರು ಪೂರೈಕೆಗೆ ಪೂರ್ವಭಾವಿ ಯೋಜನೆಗಳನ್ನು ಸಿದ್ಧಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಜಾಗೃತರಾಗಿ ಮತ್ತು ಕ್ರಿಯಾಶೀಲರಾಗಿರಲು ಅವರು ಸೂಚಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿವೇಶನ ಅತಿಕ್ರಮ ತೆರವುಗೊಳಿಸಲು ಹೋದಾಗ ಪೆಪ್ಪರ್ ಸ್ಪ್ರೇ ಹಾಕಿ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ಮುಂದಿನ ಸುದ್ದಿ
Show comments