Webdunia - Bharat's app for daily news and videos

Install App

‘ಕೈ’ ಸರ್ಕಾರದ ಅವಧಿಯಲ್ಲಿ ಆತ್ಮಹತ್ಯೆ ಹೆಚ್ಚಳ

Webdunia
ಸೋಮವಾರ, 11 ಸೆಪ್ಟಂಬರ್ 2023 (19:22 IST)
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್​ ಮಾಡಿ ಆಕ್ರೋಶ ಹೊರಹಾಕಿದೆ.. ನಿನ್ನೆಯಷ್ಟೆ ವಿಶ್ವ ಆತ್ಮಹತ್ಯೆ ತಡೆ ದಿನ ಮುಗಿದಿದೆ. ಆದರೆ ದುರದೃಷ್ಟವಶಾತ್ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಮಾತ್ರ ನಿಲ್ಲುತ್ತಿಲ್ಲ. ಕಲಬುರಗಿಯ ರೈತ ಬರದಿಂದ ಬೆಳೆ ಕೈ ಕೊಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ರು.. ಸಿಎಂ ಸಿದ್ದರಾಮಯ್ಯರವರ ಮೊದಲ ಸರ್ಕಾರದ ಅವಧಿಯಲ್ಲಿ, ಸರ್ಕಾರದ ರೈತ ವಿರೋಧಿ ನೀತಿಯಿಂದ 4,257 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.. ಈ ಸರ್ಕಾರದ ಮೂರು ತಿಂಗಳ ಅವಧಿಯಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಸಂಖ್ಯೆ ಒದಗಿಸಿದೆ. ಆದರೆ ಬೇಜವಾಬ್ದಾರಿ ಕಾಂಗ್ರೆಸ್​​ ಸರ್ಕಾರ ಮಾತ್ರ ರೈತರ ಸಂಕಷ್ಟಗಳಿಗೆ ಸ್ಪಂದಿಸದೇ, ರೈತರ ಆತ್ಮಹತ್ಯೆಗಳನ್ನು ಅವಹೇಳನ, ವ್ಯಂಗ್ಯ ಮಾಡಿಕೊಂಡು ಅಪಮಾನ ಮಾಡುತ್ತಿದೆ ಎಂದು ಕಿಡಿಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments