ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಏರಿಕೆ!

Webdunia
ಗುರುವಾರ, 25 ಆಗಸ್ಟ್ 2022 (16:41 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ಕೆಎಸ್ಪಿಸಿಬಿ ಅಧ್ಯಯನದಲ್ಲಿ  ಆಶ್ಚರ್ಯಕರ ಸಂಗತಿ ಬಯಲಾಗಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬವೇ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗಿದ್ದ ವೇಳೆ ವಾಯು ಮಾಲಿನ್ಯ ತಗ್ಗಿತ್ತು. ಆದರೆ ಇದೀಗ ಯಥಾಸ್ಥಿತಿ ಕೆಲಸಗಳು ಶುರುವಾಗಿರುವ ಹಿನ್ನೆಲೆ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಾಯು ಮಾಲಿನ್ಯದ ಹೆಚ್ಚಳವಾಗುತ್ತಿರುವುದನ್ನು ಕಂಡು ಸದ್ಯ ಕೆಎಸ್ಪಿಸಿಬಿ ತಲೆಕಡೆಸಿಕೊಂಡಿದೆ. ಇನ್ನು ನಗರದ ಮಾಲಿನ್ಯಕ್ಕೆ ಸಾರಿಗೆ ವ್ಯವಸ್ಥೆಯೇ ಮೂಲ ಕಾರಣ. ಶೇಕಡಾ 63.5 ರಷ್ಟು ಮಾಲಿನ್ಯ ವಾಹನಗಳಿಂದ ಆಗುತ್ತಿದೆ. ಜೊತೆಗೆ ರಸ್ತೆ ಕಾಮಗಾರಿ, ಇಂಡಸ್ಟ್ರೀಸ್, ಹೋಟೆಲ್, ಟ್ರಾಫಿಕ್ ಸಿಗ್ನಲ್ನಿಂದ ಅಧಿಕ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಿ, ಎಲೆಕ್ಟ್ರಿಕಲ್ ಬಸ್ ಖರೀದಿಗೆ ಮನವಿ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments