ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಏರಿಕೆ!

Webdunia
ಸೋಮವಾರ, 5 ಜೂನ್ 2023 (13:49 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ಕೆಎಸ್ಪಿಸಿಬಿ ಅಧ್ಯಯನದಲ್ಲಿ  ಆಶ್ಚರ್ಯಕರ ಸಂಗತಿ ಬಯಲಾಗಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬವೇ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗಿದ್ದ ವೇಳೆ ವಾಯು ಮಾಲಿನ್ಯ ತಗ್ಗಿತ್ತು. ಆದರೆ ಇದೀಗ ಯಥಾಸ್ಥಿತಿ ಕೆಲಸಗಳು ಶುರುವಾಗಿರುವ ಹಿನ್ನೆಲೆ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಾಯು ಮಾಲಿನ್ಯದ ಹೆಚ್ಚಳವಾಗುತ್ತಿರುವುದನ್ನು ಕಂಡು ಸದ್ಯ ಕೆಎಸ್ಪಿಸಿಬಿ ತಲೆಕಡೆಸಿಕೊಂಡಿದೆ. ಇನ್ನು ನಗರದ ಮಾಲಿನ್ಯಕ್ಕೆ ಸಾರಿಗೆ ವ್ಯವಸ್ಥೆಯೇ ಮೂಲ ಕಾರಣ. ಶೇಕಡಾ 63.5 ರಷ್ಟು ಮಾಲಿನ್ಯ ವಾಹನಗಳಿಂದ ಆಗುತ್ತಿದೆ. ಜೊತೆಗೆ ರಸ್ತೆ ಕಾಮಗಾರಿ, ಇಂಡಸ್ಟ್ರೀಸ್, ಹೋಟೆಲ್, ಟ್ರಾಫಿಕ್ ಸಿಗ್ನಲ್ನಿಂದ ಅಧಿಕ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಿ, ಎಲೆಕ್ಟ್ರಿಕಲ್ ಬಸ್ ಖರೀದಿಗೆ ಮನವಿ ಮಾಡುವ ಸಾಧ್ಯತೆಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments