ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ..!

Webdunia
ಸೋಮವಾರ, 6 ಡಿಸೆಂಬರ್ 2021 (19:43 IST)
ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ನವೋದಯಾ ವಿದ್ಯಾಲಯದಲ್ಲಿ ಮತ್ತೆ ಕೋವಿಡ್ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ರವಿವಾರ ಶಾಲೆಯಲ್ಲಿ 69 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು.
ಇವತ್ತು ಮತ್ತೆ 38 ಕೇಸ್ ಪತ್ತೆಯಾಗಿದೆ. ಇದರೊಂದಿಗೆ 94 ವಿದ್ಯಾರ್ಥಿಗಳು, 13 ಶಿಕ್ಷಕರರು ಸೇರಿದಂತೆ 107 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ನಂತರ 418 ವಿದ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದಿದ್ದ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಿತ್ತು. 418 ರಲ್ಲಿ 107 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಈಗಾಗಲೇ ಜಿಲ್ಲಾಡಳಿತ ಜವಾಹರ್ ನವೋದಯ ವಿದ್ಯಾಲಯ ಸೀಲ್ ಡೌನ್ ಮಾಡಿದೆ. ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲದ ಕಾರಣ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments