ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ ಹೆಚ್ಚಿದ ಬೇಡಿಕೆ

Webdunia
ಶುಕ್ರವಾರ, 26 ಮೇ 2023 (16:36 IST)
ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬಿ ಪಿ ಎಲ್ ಕಾರ್ಡ್ ಗೆ  ಬೇಡಿಕೆ ಹೆಚ್ಚಾಗಿದೆ.ರಾಜ್ಯದಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ ಕುರಿತು ವಿಚಾರಣೆ  ನಡೆಯುತ್ತಿದೆ.ಸಿದ್ದರಾಮಯ್ಯ ಸರ್ಕಾರದ ಹಲವು ಭಾಗ್ಯ, ಗ್ಯಾರಂಟಿ ಘೋಷಣೆ ಹಿನ್ನೆಲೆ ಬಿಪಿಎಲ್ ಕಾರ್ಡ್ ಹೊಂದಿರಬೇಕು ಎಂಬ ಮಾನದಂಡ‌ ಕಾರಣದಿಂದ ಇದೀಗ ಸರ್ಕಾರದ ಉಚಿತ ಸ್ಕೀಂ ಪಡೆಯಲು ಮಧ್ಯಮ ವರ್ಗದ ಜನತೆ ಬಡ ಜನತೆ ಮುಗ್ಗಿ ಬಿದ್ದಿದೆ.ಕಳೆದೆರಡು ವರುಷದಿಂದ ಇಲ್ಲಿಯವರೆಗೆ 2.87 ಲಕ್ಷ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.46,576 ಎಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಯಾಗಿದ್ದು,ಒಟ್ಟು 3.36 ಲಕ್ಷ BPL, APL ಕಾರ್ಡ್ ಅರ್ಜಿ ಸಲ್ಲಿಕೆಯಗಿದ್ದು,ಇಲ್ಲಿಯವರೆಗೆ 4 ಕೋಟಿ ಜನರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹಂಚಿಕೆಯಾಗಿದೆ.
 
BPL ಕಾರ್ಡ್ ಗೆ ಡಿಮ್ಯಾಂಡ್ ಹೆಚ್ಚಾದ ಹಿನ್ನಲೆ ಇನ್ಮುಂದೆ BPL ಕಾರ್ಡ್ ನೀಡಲು ಹಣಕಾಸು ಇಲಾಖೆ ಅನುಮತಿ ಅಗತ್ಯ ಇದೆ.ರಾಷ್ಟ್ರೀಯ ಆಹಾರ ಹಕ್ಕು ಕಾಯಿದೆ ಮಿತಿ ತಲುಪಿರುವ ಕರ್ನಾಟಕ‌ ರಾಜ್ಯ ಕಳೆದ ಮೂರು ತಿಂಗಳ ಹಿಂದೆ‌ 1.5 ಲಕ್ಷ ಬಿಪಿಎಲ್ ಕಾರ್ಡ್ ಅನುಮತಿ ನೀಡಿದೆ.ಇನ್ನು ಬಾಕಿ ಉಳಿದ ಎರಡು ಲಕ್ಷ ಅರ್ಜಿಗೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು.ಅನಾರೋಗ್ಯದಂಥ ಎಮರ್ಜೆನ್ಸಿ ಇದ್ರೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ.ಮತ್ತೊಂದು ಕಡೆ ಸರ್ಕಾರ ಘೋಷಣೆ ‌ಮಾಡಿರುವ ಉಚಿತ ಅಕ್ಕಿ ವಿತರಣೆ ಸ್ಕೀಂಗೆ ಮುಂದಿನ ತಿಂಗಳು ಎರಡನೇ ತಾರೀಖಿನವರೆಗೂ ಕಾರ್ಡ್ ನೀಡದಿರಲು ನಿರ್ಧಾರ ಮಾಡಲಾಗಿದೆ.ನಮಗೆ ಬಿಪಿಎಲ್ ಕಾರ್ಡ್ ಮಾಡಿಸಿಕೊಡಿ ಎಂದು ಅಧಿಕಾರಿಗಳಿಗೆ ಜನರು ಮನವಿಗಳ ಸುರಿಮಾಲೆಯೇ ಮಾಡ್ತಿದ್ದಾರೆ.
 
ಯಾವ ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ
 
ಟಾಪ್ 5 ಬಿಪಿಎಲ್‌ ಕಾರ್ಡ್ ಅರ್ಜಿ ಸಲ್ಲಿಕೆಯಾದ ಜಿಲ್ಲೆಗಳು
ಬೆಳಗಾವಿ 27,411
ವಿಜಯಪುರ 17,228
ಬೆಂಗಳೂರು 12,765
ಬೀದರ್ 12,661
ರಾಯಚೂರು 12,498
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments