Webdunia - Bharat's app for daily news and videos

Install App

ಟೊಮೆಟೋಗೆ ಹೆಚ್ಚಿದೆ ಬೇಡಿಕೆ

Webdunia
ಸೋಮವಾರ, 23 ಮೇ 2022 (20:05 IST)
ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಹಿನ್ನೆಲೆಯಲ್ಲಿ ತರಕಾರಿ ಬೆಳೆಗಳಿಗೆ ಅಪಾರ ಪ್ರಮಾಣ ಹಾನಿ ಉಂಟಾಗಿದ್ದು, ಮಾರುಕಟ್ಟೆಯಲ್ಲಿ ಟೊಮೆಟೋ ಪೂರೈಕೆಯಲ್ಲಿ ಕುಸಿತವುಂಟಾಗಿ ಬೇಡಿಕೆ ಹೆಚ್ಚಾಗಿದೆ.
 
ಹೋಟೆಲ್‌ ಹಾಗೂ ಗ್ರಾಹಕರ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್‌ ನಿಂದ ಟೊಮೆಟೋ ಆಮದು ಮಾಡಿಕೊಳ್ಳುವಂತಾಗಿದೆ.
 
ಪ್ರತಿ ದಿನ ಸುಮಾರು 5 ರಿಂದ 6 ಲಾರಿಗಳಿಂದ ಮಹಾರಾಷ್ಟ್ರದ ನಾಸಿಕ್‌ನಿಂದ ರಾಜಧಾನಿಗೆ ಟೊಮೆಟೋ ಪೂರೈಕೆ ಆಗುತ್ತಿದೆ. ಇದರಿಂದಾಗಿ ಬೇಡಿಕೆಯಷ್ಟು ಪೂರೈಸಲು ಸಾಧ್ಯವಾಗಿದೆ. ಟೊಮೆಟೋ ಪೂರೈಕೆಕುಸಿತ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ 14 ಕೆ.ಜಿ ಟೊಮೆಟೋ ಬಾಕ್ಸ್‌ 1,400 ರಿಂದ 1,600 ರೂ.ವರೆಗೂ ದರ ಆಗಿದೆ. ಅತ್ಯುತ್ತಮ ಗುಣಮಟ್ಟದ ಟೊಮೆಟೋ 1,800 ರಿಂದ 2 ಸಾವಿರ ವರೆಗೂ ಮಾರಾಟವಾಗುತ್ತಿದೆ ಎಂದು ಕಲಾಸಿ ಪಾಳ್ಯ ಮಾರುಕಟ್ಟೆ ಹೋಲ್‌ ಸೇಲ್‌ ವ್ಯಾಪಾರಿ ಶ್ರೀಕಾಂತ್‌ ಹೇಳುತ್ತಾರೆ.
 
ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮೆಟೋ 100 ರಿಂದ 120 ರೂ.ವರೆಗೂ ಮಾರಾಟವಾಗುತ್ತಿದ್ದು 1 ಕೆ.ಜಿ.ಖರೀದಿಸುವವರು 250 ಗ್ರಾಂ ಖರೀದಿಸುತ್ತಿ ದ್ದಾರೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಎಲ್ಲ ತರಕಾರಿ ಉತ್ಪನ್ನಗಳು ಅಧಿಕವಾಗಿದೆ.
 
ಇನ್ನೂ ಒಂದು ತಿಂಗಳ ಕಾಲ ಇದೇ ಪರಿಸ್ಥಿತಿ ಇರಲಿದೆ ಎಂದು ತಿಳಿಸುತ್ತಾರೆ. ಈ ಮಧ್ಯೆ, ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಹೆಚ್ಚಳವಾಗಿರು ವುದು ತಳ್ಳುಬಂಡಿವ್ಯಾಪಾರಸ್ಥರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ,ಬೆಲೆ ಇಳಿ ಯುವ ವರೆಗೂ ಮಾರಾಟ ಮಾಡದೇ ಇರಲುಅವರು ನಿರ್ಧರಿಸಿದ್ದಾರೆ. ಅಕಾಲಿ ಮಳೆಯಿಂದಾಗಿ ಉತ್ತಮ ಗುಣಮಟ್ಟದ ಟೊಮೆಟೋ ಮಾರುಕಟ್ಟೆಗೆ ಬರುತ್ತಿಲ್ಲ. ತಳ್ಳುಬಂಡಿಯಲ್ಲಿ 100 ರಿಂದ 120 ರೂ. ದರದಲ್ಲಿ ಟೊಮೆಟೋ ಮಾರಾಟ ಕಷ್ಟವಾಗಲಿದೆ. ಈ ದೃಷ್ಟಿಯಿಂದಾಗಿ ಬೆಲೆ ಇಳಿಕೆ ಆಗುವವರೆಗೂ ಟೊಮೆಟೋ ಮಾರಾಟದಿಂದ ದೂರ ಉಳಿದಿದ್ದೇನೆ ಎನ್ನು ತ್ತಾರೆ ಎಂದು ತಳ್ಳು ಬಂಡಿ ವ್ಯಾಪಾರಿ ಪೀಣ್ಯದ ಜಗದೀಶ್‌.
 
ಕೆ.ಆರ್‌.ಮಾರುಕಟ್ಟೆ, ಕಲಾಸಿಪಾಳ್ಯ, ಮಲ್ಲೇಶ್ವರ, ಕೆ. ಆರ್‌.ಪುರಂ ಸೇರಿದಂತೆ ನಗರದ ಹಲವು ಮಾರುಕಟ್ಟೆ ಗಳಿಗೆ ಇದೀಗ ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಟೊಮೆಟೋ ಪೂರೈಕೆಆಗುತ್ತಿದೆ. ಮಂಡ್ಯ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 70 ರಿಂದ 80 ಟೆಂಪೊಮೂಲಕ ಟೊಮೆಟೋ ಪೂರೈಕೆ ಆಗುತ್ತಿದೆ. ಆದರೆ ಅದುಕೆಲವೇ ಕ್ಷಣಗಳಲ್ಲಿ ಮಾರಾಟವಾಗಿ ಹೋಗುತ್ತಿದೆ ಎಂದು ಹೋಲ್‌ ಸೇಲ್‌ ವ್ಯಾಪಾರಿಗಳು ಹೇಳುತ್ತಾರೆ.
 
ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿನಪ್ರದೇಶಗಳಿಂದ ರಾಜಧಾನಿ ಮಾರುಕಟ್ಟೆಗೆ ಟೊಮೆಟೋಪೂರಕೆ ಆಗುತ್ತಿತ್ತು. ಆದರೆಅಕಾಲಿಕ ಮಳೆ ಹಿನ್ನೆಲೆಯಲ್ಲಿಅಪಾರ ಪ್ರಮಾಣದಲ್ಲಿ ಚಪ್ಪರದ ಬೆಳೆಗಳಿಗೆ ಅಪಾರ ಹಾನಿಉಂಟಾಗಿದ್ದರಿಂದ ಪೂರೈಕೆ ಮೇಲೂಪರಿಣಾಮ ಬೀರಿದೆ. ಆ ಹಿನ್ನೆಲೆಯಲ್ಲಿಮಹಾರಾಷ್ಟ್ರ ನಾಸಿಕ್‌ನಿಂದ ಟೊಮೆಟೋ ಪೂರೆಕೆ ಆಗುತ್ತಿದೆ. ಆದರೂ ಬೇಡಿಕೆ ಇದ್ದಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments