Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ

Webdunia
ಮಂಗಳವಾರ, 7 ಸೆಪ್ಟಂಬರ್ 2021 (19:18 IST)
ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯುತ್ತದೆ.ವೃಂದ ಮತ್ತು ನೇಮಕಾತಿ ಹಲವು ಬೇಡಿಕೆ ಆಧರಿಸಿ ಧರಣಿ ನಡೆಸಿದ್ರು .ಅಷ್ಟೇ ಅಲ್ಲದೇ ಪಾಲಿಕೆಯ ಸೇವೆಗಳಲ್ಲಿ ವ್ಯತ್ಯಯವಾಗಿದೆ.ವೃಂದ ಮತ್ತು ನೇಮಕಾತಿ ನಿಯಾಮಾಳಿಗಳನ್ವಯ 5219 ಹುದ್ದೆಗಳಿಗೆ ಮಂಜೂರು ವಿಚಾರವಾಗಿ ಕರ್ತವ್ಯ ಬಹಿಷ್ಕರಿಸಿ ಮುಷ್ಕರವನ್ನ  ಪಾಲಿಕೆ ಮುಂಭಾಗ ನೌಕರರು ಮಾಡಿದ್ರು.
 
ಕೇಂದ್ರ ಕಚೇರಿ ಸೇರಿ 198 ವಾರ್ಡ್ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ರು.ಮೂವರ ಕೆಲಸ ಒಬ್ಬ ನೌಕರನ‌ ಮೇಲೆ ಬಿದ್ದಿದೆ.ನೇಮಕಾತಿ ಸಂಬಂಧ ಹಲವು ಬಾರಿ ಪ್ರಸ್ತಾವನೆ ಹೋಗಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ.ಈಗಲಾದ್ರೂ 5219 ಹುದ್ದೆಗಳಿಗೆ ಮಂಜೂರು ಮಾಡಬೇಕು.ಕೋವಿಡ್ ಮೃತ ಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು.ನಗರ ಯೊಜನೆ ವಿಭಾಗದಲ್ಲಿ 39 ಹುದ್ದೆ ಸೃಷ್ಟಿಸಿ ವಿರೋಧಿಸಿ ಮುಷ್ಕರ‌ ಮಾಡಿದ್ರು.
 
ಹಂತ‌ ಹಂತವಾಗಿ ಹೋರಾಟದ ಕಾವು ಹೆಚ್ಚಿಸಲು ಪ್ಲ್ಯಾನ್ ಮಾಡಿದ್ದು, ಇಂದು ಕರ್ತವ್ಯಕ್ಕೆ ಹಾಜರಾಗದೇ ಧರಣಿ ನಡೆಸಿದ್ರು.ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ರಮ‌ ನಿಲ್ಲಿಸಲು ನಿರ್ಧಾರ ಮಾಡಿದ್ದು ,ವ್ಯಾಕ್ಸಿನೇಷನ್‌ ಆರೋಗ್ಯ ಸಿಬ್ಬಂದಿಯಾದ್ರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಕೆಲಸ ಮಾಡುವುದು ಸೇರಿದಂತೆ ಮೂರನೆ ದಿನ ಕಸ ವಿಲೇವಾರಿ ನಿಲ್ಲಿಸಿ ಧರಣಿ ಮಾಡಲು ಲೆಕ್ಕಚಾರ ಮಾಡಿದ್ದಾರೆ.ಕಸ‌‌ ವಿಲೇವಾರಿ ಇಂಜಿನಿಯರ್ - ಹೆಲ್ತ್ ಇನ್ಸ್ ಪೆಕ್ಟರ್ ಮಾರ್ಗದರ್ಶನದಲ್ಲೇ ನಡೆಯಲಿದೆ.ಇಂದು ಇದೇ ವಿಷಯವಾಗಿ ಬಹುತೇಕ ಎಲ್ಲ ಪಾಲಿಕೆ‌ ಕಚೇರಿಗಳು ಕ್ಲೋಸ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments