Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಪಂದ್ಯ

Webdunia
ಗುರುವಾರ, 30 ಮೇ 2019 (17:39 IST)
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹುಬ್ಬಳ್ಳಿಯಲ್ಲಿ  ಭಾರತ ಎ ತಂಡ ಹಾಗೂ ಶ್ರೀಲಂಕಾ ಎ ತಂಡದ ಅನಧಿಕೃತ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಪಂದ್ಯವು ನಾಳೆ ಬೆಳಗ್ಗೆ 9-30ಕ್ಕೆ ನಡೆಯಲಿದೆ.

 ಇಲ್ಲಿನ ರಾಜನಗರದ ಕೆ ಎಸ್ ಸಿ ಎ ಮೈದಾನದಲ್ಲಿ ಪಂದ್ಯ ನಡೆಯಲಿದೆ ಎಂದು ಕೆ ಎಸ್ ಸಿ ಎ ಸಂಚಾಲಕ ಬಾಬಾ ಬೂಸದ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ಜರುಗಲಿರುವ ಭಾರತದ ಹಾಗೂ ಶ್ರೀಲಂಕಾ ಅನಧಿಕೃತ ಕ್ರಿಕೆಟ್ ಸರಣಿಯ ಎರಡನೇ ಪಂದ್ಯವನ್ನು ಕೆ ಎಸ್ ಸಿ ಎ ಮೈದಾನದಲ್ಲಿ ಆಡಲಿವೆ ಎಂದರು. ಕ್ರಿಕೆಟ್ ಪಂದ್ಯಾವಳಿಗೆ ಹು-ಧಾ ಮಹಾನಗರ ಪೊಲೀಸ್ ಆಯುಕ್ತರಾದ ಎಂ.ಎನ್.ನಾಗರಾಜ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು. ಭಾರತೀಯ ತಂಡವನ್ನು ಪ್ರಿಯಾಂಕ್ ಪಾಂಚಾಲ, ಶ್ರೀಲಂಕಾ ತಂಡವನ್ನು ಅಸನ್ ಪ್ರಿಯಾಂಜನ್ ನಾಯಕರಾಗಿ ಮುನ್ನಡಿಸಲಿದ್ದಾರೆ ಎಂದರು.

ಎರಡು ತಂಡದ ನಾಯಕರುಗಳು ಮೈದಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಗೆಲ್ಲುವ ತವಕ ವ್ಯಕ್ತಪಡಿಸಿದರು ಎಂದರು. ಈಗಾಗಲೇ ಕ್ರೀಡಾಂಗಣದ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು, ಅಂತಿಮ ಚಟುವಟಿಕೆಗಳು ಬಾಕಿಯಿದೆ. ಇಂದು ಸಂಜೆಯವರೆಗೆ ಎಲ್ಲ ಪೂರ್ಣಗೊಳ್ಳಲಿವೆ ಎಂದು ಅವರು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments