‌ಭಾರತ ಬಂದ್: ಹೆಚ್.ಡಿ.ದೇವೇಗೌಡರು ಹೇಳಿದ್ದೇನು?

Webdunia
ಭಾನುವಾರ, 9 ಸೆಪ್ಟಂಬರ್ 2018 (18:03 IST)
ನಿರಂತರ ಇಂಧನ ದರ ಏರಿಕೆ ವಿರೋಧಿಸಿ  ಕರೆ ನೀಡಿರುವ ದೇಶವ್ಯಾಪಿ ಬಂದ್ ಗೆ ಹಾಸನ ಜಿಲ್ಲೆಯಲ್ಲೂ ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಜೆಡಿಎಸ್, ಕಾಂಗ್ರೆಸ್ ಜೊತೆಗೆ ಲಾರಿ ಮಾಲೀಕರ ಸಂಘ, ಆಟೋ ಸಂಘ ಸೇರಿ ಹಲವು ಸಂಘಟನೆಗಳು  ಬಂದ್  ಗೆ ಸಹಕಾರ ನೀಡುವುದಾಗಿ ಹೇಳಿವೆ. ಈಗಾಗಲೇ ಸಾರಿಗೆ ನೌಕರರು ಸಂಪೂರ್ಣ ಬೆಂಬಲ ನೀಡಿರುವುದರಿಂದ   ಶಾಲಾ, ಕಾಲೇಜ್ ಬಂದ್ ಆಗುವ ಸಾಧ್ಯತೆ ಹೆಚ್ಚಿದ್ದು, ಸೆಪ್ಟಂಬರ್ 10 ರ ಬಂದ್ ಯಶಸ್ವಿಯಾಗುವ ಸಾಧ್ಯತೆ ಇದೆ.

ಭಾರತ ಬಂದ್ ಕುರಿತು ಹಾಸನದಲ್ಲಿ   ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಬಂದ್ ಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. 

ರಾಜ್ಯದ ಎಲ್ಲೆಲ್ಲಿ ನಮ್ಮ ಪಕ್ಷಕ್ಕೆ ಶಕ್ತಿ ಇದೆಯೋ ಅಲ್ಲೆಲ್ಲಾ ಸಹಕಾರ ನೀಡುತ್ತೇವೆ. ನಾನು, ಕುಮಾರಸ್ವಾಮಿ ನಾಳೆ ದೆಹಲಿಗೆ ಹೋಗುತ್ತಿರುವುದರಿಂದ ನಮ್ಮ ಪಕ್ಷದ ಕಾರ್ಯಕರ್ತರು ಬಂದ್ ನಲ್ಲಿ ಭಾಗಿಯಾಗಲಿದ್ದಾರೆ ಎಂದರು. ದಿನದಿಂದ ದಿನಕ್ಕೆ ತೈಲಬೆಲೆ ಗಗನಕ್ಕೆ ಏರುತ್ತಿರುವುದರಿಂದ ಶ್ರೀಸಾಮಾನ್ಯನ ಬದುಕು ಸಂಕಷ್ಟಕ್ಕೆ ಸಿಲುಕಿದೆ. ರೈತರು, ಜನಸಾಮಾನ್ಯರ ಜೀವನ ಕಷ್ಟವಾಗಿದೆ. ಇಂಧನ ದರ ಏರಿಕೆಯಿಂದ ಸರಕು ಸಾಗಣೆ ದರ ಹೆಚ್ಚಾಗಿ ಗ್ರಾಹಕರಿಗೆ ಹೊರೆಯಾಗಿದೆ. ಈ ಎಲ್ಲಾ ಕಾರಣದಿಂದ ಭಾರತ್ ಬಂದ್ ಗೆ ಸಹಕಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments