Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

Sampriya
ಗುರುವಾರ, 15 ಮೇ 2025 (16:18 IST)
Photo Credit X
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ 26 ಪ್ರವಾಸಿಗರು ಮೃತಪಟ್ಟ ಘಟನೆ  ನಂತರ ಮೊದಲ ಬಾರಿ ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಶ್ರೀನಗರ ಸೇನಾ ಕಚೇರಿಗೆ ಭೇಟಿ ನೀಡಿದ್ದಾರೆ.

ಈ ವೇಳೆ ಗಡಿ ನಿಯಂತ್ರಣಾ ರೇಖೆ ಸೇರಿದಂತೆ ಒಟ್ಟಾರೆ ಭದ್ರತಾ ಪರಿಸ್ಥಿತಿಯ ಬಗ್ಗೆ ಅವರು ಸೇನಾಧಿಕಾರಿಗಳಿಂದ ಮಾಹಿತಿ ಪಡೆದರು.

ಉಗ್ರರ ವಿರುದ್ಧದ ಹೋರಾಡಿ ಪ್ರಾಣತೆತ್ತ ವೀರ ಯೋಧರಿಗೆ ನನ್ನ ನಮನಗಳು. ಆಪರೇಷನ್‌ ಸಿಂಧೂರ ಬದ್ಧತೆಯಾಗಿದೆ, ಇದು ಉಗ್ರರ ವಿರುದ್ಧದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲು ನಾವು ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತೇವೆ ಎನ್ನುವುದನ್ನು ಇದು ಸಾಕ್ಷಿಯಾಗಿದೆ. ಪಾಕಿಸ್ತಾನದಲ್ಲಿ ಅಡಗಿರುವ ಭಯೋತ್ಪಾದಕರು ಮತ್ತು ಅವರ ಮಾಸ್ಟರ್‌ಮೈಂಡ್‌ಗಳು ಈಗ ಭಾರತೀಯ ಪಡೆಗಳ ಗುರಿಯಾಗಿದ್ದಾರೆ ಎಂದರು.

ಭಾರತ ಯಾವತ್ತಿಗೂ ಯುದ್ಧವನ್ನು ಬೆಂಬಲಿಸುವುದಿಲ್ಲ. ಆದರೆ ನಮ್ಮ ಸಾರ್ವಭೌಮತ್ವದ ಮೇಲೆ ದಾಳಿಯಾದಾಗ ನಾವು ಪ್ರತಿಕ್ರಿಯಿಸುತ್ತೇವೆ. ಕಳೆದ 35-40 ವರ್ಷಗಳಿಂದ ಭಾರತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಿದೆ. ಪಹಲ್ಗಾಮ್‌ ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರದ ಜನ ಉಗ್ರರು ಮತ್ತು ಪಾಕಿಸ್ತಾನದ ಮೇಲೆ ತೋರಿಸಿರುವ ಸಿಟ್ಟಿನಿಂದಾಗಿಯೇ ಶತ್ರುಗಳನ್ನು ನಾಶ ಮಾಡಲು ಸಾಧ್ಯವಾಯಿತು ಎಂದುಕೊಳ್ಳುತ್ತೇನೆ. ಭಾರತದ ಈ ನಡೆಯನ್ನು ಶತ್ರುಗಳು ಎಂದಿಗೂ ಮರೆಯಲಾರರು ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಮುಂದಿನ ಸುದ್ದಿ
Show comments