Webdunia - Bharat's app for daily news and videos

Install App

ಭಾರತೀಯ ಸಂಸ್ಕೃತಿ ಹಾಗೂ ಪುರಾತನ ಭಾಷೆಯಾದ ಸಂಸ್ಕೃತ ಒಂದಕ್ಕೊಂದು ನಿಕಟ ಸಂಬಂಧ

Webdunia
ಗುರುವಾರ, 9 ಸೆಪ್ಟಂಬರ್ 2021 (22:00 IST)
ಭಾರತೀಯ ಸಂಸ್ಕೃತಿ ಹಾಗೂ ಪುರಾತನ ಭಾಷೆಯಾದ ಸಂಸ್ಕೃತ ಒಂದಕ್ಕೊಂದು ನಿಕಟ ಸಂಬಂಧ ಹೊಂದಿವೆ. ದೇಶದ ಸಂಸ್ಕೃತಿ ಸುಭದ್ರಗೊಳ್ಳಬೇಕಾದರೆ ಸಂಸ್ಕೃತದ ಪ್ರಚಾರ ನಡೆಯಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ತಿಳಿಸಿದರು. 
 
 
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ನಗರದಲ್ಲಿ ಗುರುವಾರ ಹಮ್ಮಿಕೊಂಡ ಸಮಾರಂಭದಲ್ಲಿ ಸಂಸ್ಕೃತ ಮಹೋತ್ಸವವನ್ನು ಉದ್ಘಾಟಿಸಿದ ಅವರು, ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ 15 ಮಂದಿಗೆ ಸಂಸ್ಕೃತ ಗ್ರಂಥ ಪುರಸ್ಕಾರ ಪ್ರದಾನ ಮಾಡಿದರು. 
 
ಸಂಸ್ಕೃತವು ವಿಶ್ವದ ಹಲವು ಭಾಷೆಗಳ ತಾಯಿ. ಹೇರಳ ಭಾಷಾ ಸಂಪನ್ಮೂಲವನ್ನು ಹೊಂದಿರುವ ಸಂಸ್ಕೃತವನ್ನು ಸಂಕುಚಿತ ದೃಷ್ಟಿಕೋನದಿಂದ ನೋಡುವ ಮನೋಭಾವ ತೊಲಗಬೇಕು. ಭಾಷೆಯು ಸರ್ವವ್ಯಾಪಿ, ಸರ್ವಸ್ಪರ್ಶಿಯಾದಲ್ಲಿ ದೇಶದ ಸಂಸ್ಕೃತಿಯೂ ಶ್ರೀಮಂತಗೊಳ್ಳುತ್ತದೆ. ಹಾಗಾಗಿ, ಈ ಭಾಷೆಯ ಪ್ರಸಾರಕ್ಕೆ ವಿದ್ವಾಂಸರು ಹಾಗೂ ವಿಶ್ವವಿದ್ಯಾಲಯ ಶ್ರಮಿಸಬೇಕು ಎಂದರು. 
 
 
ಸಂಸ್ಕೃತವು ಪರಿಪೂರ್ಣ ವ್ಯಾಕರಣವನ್ನು ಹೊಂದಿದೆ. ಕಂಪ್ಯೂಟರ್‌ ಭಾಷೆಗಳನ್ನು ಅಭಿವೃದ್ಧಿಪಡಿಸುವಲ್ಲಿಯೂ ಈ ಭಾಷೆ ನೆರವಾಗಿದೆ.  ವಸುದೈವ ಕುಟುಂಬಕಂ ಪರಿಕಲ್ಪನೆಯ ಹಿಂದೆಯೂ ಈ ಭಾಷೆಯ ಪ್ರಭಾವವಿದೆ. ಈ ಭಾಷೆ ಹಾಗೂ ಸಂಸ್ಕೃತಿಯ ಪ್ರಸಾರಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ. ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗಲಿವೆ’ ಎಂದು ತಿಳಿಸಿದರು. 
 
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಕೋಟೆಮನೆ, ಸರ್ವರ ಕಲ್ಯಾಣ ಸಂಸ್ಕೃತದ ಆಶಯ. ಕನ್ನಡದ ವೈಜ್ಞಾನಿಕ ಹಾಗೂ ವೈಚಾರಿಕ ಸಾಹಿತ್ಯಕ್ಕೆ ಸಂಸ್ಕೃತದ ಕೊಡುಗೆ ಮಹತ್ವದ್ದು. ಸಂಸ್ಕೃತ ವಿಶ್ವವಿದ್ಯಾಲಯವು ಬೋಧನೆಯ ಜೊತೆಗೆ ಸಂಶೋಧನೆಯನ್ನೂ ಕೈಗೊಳ್ಳಬೇಕು ಎಂದು ಹೇಳಿದರು. 
 
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಇ. ದೇವನಾಥನ್, ‘ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ನಿರ್ದೇಶನದಂತೆ ವಿಶ್ವವಿದ್ಯಾಲಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು
collage

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments