Webdunia - Bharat's app for daily news and videos

Install App

ಭಾರತೀಯ ಸಂಸ್ಕೃತಿ ಹಾಗೂ ಪುರಾತನ ಭಾಷೆಯಾದ ಸಂಸ್ಕೃತ ಒಂದಕ್ಕೊಂದು ನಿಕಟ ಸಂಬಂಧ

Webdunia
ಗುರುವಾರ, 9 ಸೆಪ್ಟಂಬರ್ 2021 (22:00 IST)
ಭಾರತೀಯ ಸಂಸ್ಕೃತಿ ಹಾಗೂ ಪುರಾತನ ಭಾಷೆಯಾದ ಸಂಸ್ಕೃತ ಒಂದಕ್ಕೊಂದು ನಿಕಟ ಸಂಬಂಧ ಹೊಂದಿವೆ. ದೇಶದ ಸಂಸ್ಕೃತಿ ಸುಭದ್ರಗೊಳ್ಳಬೇಕಾದರೆ ಸಂಸ್ಕೃತದ ಪ್ರಚಾರ ನಡೆಯಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ತಿಳಿಸಿದರು. 
 
 
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ನಗರದಲ್ಲಿ ಗುರುವಾರ ಹಮ್ಮಿಕೊಂಡ ಸಮಾರಂಭದಲ್ಲಿ ಸಂಸ್ಕೃತ ಮಹೋತ್ಸವವನ್ನು ಉದ್ಘಾಟಿಸಿದ ಅವರು, ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ 15 ಮಂದಿಗೆ ಸಂಸ್ಕೃತ ಗ್ರಂಥ ಪುರಸ್ಕಾರ ಪ್ರದಾನ ಮಾಡಿದರು. 
 
ಸಂಸ್ಕೃತವು ವಿಶ್ವದ ಹಲವು ಭಾಷೆಗಳ ತಾಯಿ. ಹೇರಳ ಭಾಷಾ ಸಂಪನ್ಮೂಲವನ್ನು ಹೊಂದಿರುವ ಸಂಸ್ಕೃತವನ್ನು ಸಂಕುಚಿತ ದೃಷ್ಟಿಕೋನದಿಂದ ನೋಡುವ ಮನೋಭಾವ ತೊಲಗಬೇಕು. ಭಾಷೆಯು ಸರ್ವವ್ಯಾಪಿ, ಸರ್ವಸ್ಪರ್ಶಿಯಾದಲ್ಲಿ ದೇಶದ ಸಂಸ್ಕೃತಿಯೂ ಶ್ರೀಮಂತಗೊಳ್ಳುತ್ತದೆ. ಹಾಗಾಗಿ, ಈ ಭಾಷೆಯ ಪ್ರಸಾರಕ್ಕೆ ವಿದ್ವಾಂಸರು ಹಾಗೂ ವಿಶ್ವವಿದ್ಯಾಲಯ ಶ್ರಮಿಸಬೇಕು ಎಂದರು. 
 
 
ಸಂಸ್ಕೃತವು ಪರಿಪೂರ್ಣ ವ್ಯಾಕರಣವನ್ನು ಹೊಂದಿದೆ. ಕಂಪ್ಯೂಟರ್‌ ಭಾಷೆಗಳನ್ನು ಅಭಿವೃದ್ಧಿಪಡಿಸುವಲ್ಲಿಯೂ ಈ ಭಾಷೆ ನೆರವಾಗಿದೆ.  ವಸುದೈವ ಕುಟುಂಬಕಂ ಪರಿಕಲ್ಪನೆಯ ಹಿಂದೆಯೂ ಈ ಭಾಷೆಯ ಪ್ರಭಾವವಿದೆ. ಈ ಭಾಷೆ ಹಾಗೂ ಸಂಸ್ಕೃತಿಯ ಪ್ರಸಾರಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ. ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗಲಿವೆ’ ಎಂದು ತಿಳಿಸಿದರು. 
 
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಕೋಟೆಮನೆ, ಸರ್ವರ ಕಲ್ಯಾಣ ಸಂಸ್ಕೃತದ ಆಶಯ. ಕನ್ನಡದ ವೈಜ್ಞಾನಿಕ ಹಾಗೂ ವೈಚಾರಿಕ ಸಾಹಿತ್ಯಕ್ಕೆ ಸಂಸ್ಕೃತದ ಕೊಡುಗೆ ಮಹತ್ವದ್ದು. ಸಂಸ್ಕೃತ ವಿಶ್ವವಿದ್ಯಾಲಯವು ಬೋಧನೆಯ ಜೊತೆಗೆ ಸಂಶೋಧನೆಯನ್ನೂ ಕೈಗೊಳ್ಳಬೇಕು ಎಂದು ಹೇಳಿದರು. 
 
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಇ. ದೇವನಾಥನ್, ‘ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ನಿರ್ದೇಶನದಂತೆ ವಿಶ್ವವಿದ್ಯಾಲಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು
collage

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments