Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಇಫೆಕ್ಟ್ ಅಪ್ಪಾಜಿ ಕ್ಯಾಂಟೀನ್ ಮೇಲೆ!

Webdunia
ಸೋಮವಾರ, 21 ಆಗಸ್ಟ್ 2017 (11:35 IST)
ಬೆಂಗಳೂರು: ಹಸಿವು ಮುಕ್ತ ಬೆಂಗಳೂರು ಮಾಡುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದರ ಪರಿಣಾಮ ಜೆಡಿಎಸ್ ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್ ಗೂ ತಟ್ಟಿದೆ.

 
ಇಂದಿರಾ ಕ್ಯಾಂಟೀನ್ ಗೆ ಪ್ರತಿಯಾಗಿ ಜೆಡಿಎಸ್ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿತ್ತು. ಇದೀಗ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿರುವ ಹಿನ್ನಲೆಯಲ್ಲಿ ಅಪ್ಪಾಜಿ ಕ್ಯಾಂಟೀನ್  ಶಾಖೆಗಳನ್ನೂ ಹೆಚ್ಚಿಸಲು ಜೆಡಿಎಸ್ ಚಿಂತನೆ ನಡೆಸಿದೆ.

ಇಂದಿರಾ ಕ್ಯಾಂಟೀನ್ ನ್ನು ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿ ಇಲ್ಲದೇ ಆರಂಭಿಸಿದ್ದು, ಇದು ಹೆಚ್ಚು ದಿನ ನಡೆಯಲ್ಲ ಎಂದು ಜೆಡಿಎಸ್ ನಾಯಕ ಟಿ. ಶರವಣ ಹೇಳಿದ್ದಾರೆ. ಇದೀಗ ತಾವು ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್ ಸಂಖ್ಯೆಯನ್ನೂ ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.

ಅಂತೂ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರ ತುತ್ತಿನ ಚೀಲ ತುಂಬಿಸುವುದಕ್ಕೆ ಮುಂದಾಗಿದ್ದಾರೆ. ರಾಜಕೀಯ ಪಕ್ಷಗಳ ಸ್ಪರ್ಧೆಯ ನಡುವೆ ಜನರಿಗೆ ಅಗ್ಗದ ದರದಲ್ಲಿ ಊಟ ಸಿಗುತ್ತಿರುವುದಂತೂ ಸತ್ಯ.

ಇದನ್ನೂ ಓದಿ.. ಸವಾಲಿಗೇ ಸವಾಲ್: ಅತ್ತ ಬಿಜೆಪಿ, ಇತ್ತ ಕಾಂಗ್ರೆಸ್ ಪ್ರತಿಭಟನೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments