ಇಂದಿರಾ ಕ್ಯಾಂಟೀನ್ ಇಫೆಕ್ಟ್ ಅಪ್ಪಾಜಿ ಕ್ಯಾಂಟೀನ್ ಮೇಲೆ!

Webdunia
ಸೋಮವಾರ, 21 ಆಗಸ್ಟ್ 2017 (11:35 IST)
ಬೆಂಗಳೂರು: ಹಸಿವು ಮುಕ್ತ ಬೆಂಗಳೂರು ಮಾಡುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದರ ಪರಿಣಾಮ ಜೆಡಿಎಸ್ ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್ ಗೂ ತಟ್ಟಿದೆ.

 
ಇಂದಿರಾ ಕ್ಯಾಂಟೀನ್ ಗೆ ಪ್ರತಿಯಾಗಿ ಜೆಡಿಎಸ್ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿತ್ತು. ಇದೀಗ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿರುವ ಹಿನ್ನಲೆಯಲ್ಲಿ ಅಪ್ಪಾಜಿ ಕ್ಯಾಂಟೀನ್  ಶಾಖೆಗಳನ್ನೂ ಹೆಚ್ಚಿಸಲು ಜೆಡಿಎಸ್ ಚಿಂತನೆ ನಡೆಸಿದೆ.

ಇಂದಿರಾ ಕ್ಯಾಂಟೀನ್ ನ್ನು ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿ ಇಲ್ಲದೇ ಆರಂಭಿಸಿದ್ದು, ಇದು ಹೆಚ್ಚು ದಿನ ನಡೆಯಲ್ಲ ಎಂದು ಜೆಡಿಎಸ್ ನಾಯಕ ಟಿ. ಶರವಣ ಹೇಳಿದ್ದಾರೆ. ಇದೀಗ ತಾವು ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್ ಸಂಖ್ಯೆಯನ್ನೂ ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.

ಅಂತೂ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರ ತುತ್ತಿನ ಚೀಲ ತುಂಬಿಸುವುದಕ್ಕೆ ಮುಂದಾಗಿದ್ದಾರೆ. ರಾಜಕೀಯ ಪಕ್ಷಗಳ ಸ್ಪರ್ಧೆಯ ನಡುವೆ ಜನರಿಗೆ ಅಗ್ಗದ ದರದಲ್ಲಿ ಊಟ ಸಿಗುತ್ತಿರುವುದಂತೂ ಸತ್ಯ.

ಇದನ್ನೂ ಓದಿ.. ಸವಾಲಿಗೇ ಸವಾಲ್: ಅತ್ತ ಬಿಜೆಪಿ, ಇತ್ತ ಕಾಂಗ್ರೆಸ್ ಪ್ರತಿಭಟನೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಂತ ಕಷ್ಟಕರ ಸಮಯದಲ್ಲಿ ಕೇಂದ್ರ ನಮಗೆ ನೆರವಾಗಬೇಕು: ಡಿಕೆ ಶಿವಕುಮಾರ್‌

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಮುಂದಿನ ಸುದ್ದಿ
Show comments