Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮೆನುವಿನಲ್ಲಿ ಏನೇನಿರುತ್ತೆ?

Webdunia
ಗುರುವಾರ, 17 ಆಗಸ್ಟ್ 2017 (08:42 IST)
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ನಿನ್ನೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಾರ್ಪಣೆ ಮಾಡಿದ್ದಾರೆ.

 
ಅಗ್ಗದ ದರದಲ್ಲಿ ಊಟ, ಉಪಾಹಾರ ನೀಡುವುದು ಈ ಕ್ಯಾಂಟೀನ್ ನ ಗುರಿ. ಇದರಿಂದ ಹಸಿವು ಮುಕ್ತ ಕರ್ನಾಟಕ ಮಾಡಬಹುದು ಮತ್ತು ಬಡವರಿಗೂ ಅಗ್ಗದ ದರದಲ್ಲಿ ಊಟ ಸಿಗುವಂತಾಗುವುದು ಎನ್ನುವುದು ಸಿಎಂ ಸಿದ್ದರಾಮಯ್ಯ ಕನಸು.

ಇದೀಗ ಈ ಕ್ಯಾಂಟೀನ್ ಮೆನುವಿನಲ್ಲಿ ಏನೇನಿರಬಹುದು ಎಂಬ ಕುತೂಹಲ ನಿಮಗಿರುತ್ತೆ ಅಲ್ವಾ? ಇಂದಿರಾ ಕ್ಯಾಂಟೀನ್ ನಲ್ಲಿ ಇಡ್ಲಿ ವಡೆ, ದೋಸೆ, ಉಪ್ಪಿಟ್ಟು, ವಾಂಗಿ ಬಾತ್, ಚಿತ್ರಾನ್ನ, ಪುಳಿಯೋಗರೆ ಸಿಗಲಿದೆ. ಆದರೆ ಅದಕ್ಕೂ ದಿನ ನಿಗದಿಯಿದೆ. ಒಂದೊಂದು ದಿನ ಒಂದೊಂದು ತಿಂಡಿ ಸಿಗಲಿದೆ.

ಬೆಳಿಗ್ಗೆ 7.30 ರಿಂದ 9.30 ರವರೆಗೆ ಉಪಾಹಾರ ದೊರೆಯಲಿದೆ. ಇಡ್ಲಿ ಎಲ್ಲಾ ದಿನಗಳಲ್ಲೂ ಲಭ್ಯ. ಆದರೆ ಪುಳಿಯೋಗರೆ ಸೋಮವಾರ, ಖಾರಾಬಾತ್ ಮಂಗಳವಾರ, ಬುಧವಾರ ಪೊಂಗಲ್,ಗುರುವಾರ ರವಾ ಖಿಚಡಿ, ಶುಕ್ರವಾರ ಚಿತ್ರಾನ್ನ ಮತ್ತು ಶನಿವಾರಗಳಂದು ಮಾತ್ರ ವಾಂಗಿಬಾತ್ ಜತೆಗೆ ಖಾರಾಬಾತ್, ಕೇಸರೀಬಾತ್ ಸಿಗಲಿದೆ.

ಇನ್ನು ಊಟದ ಸಮಯ ಮಧ್ಯಾಹ್ನ 12.30 ರಿಂದ 2.30 ರವರೆಗೆ. ಪ್ರತೀ ದಿನ ಅನ್ನ ಸಾಂಬಾರ್, ಮೊಸರನ್ನ ಸಿಗಲಿದೆ. ಅದರ ಜತೆಗೆ ಒಂದೊಂದು ದಿನ ಟೊಮೆಟೊ ಬಾತ್, ಚಿತ್ರಾನ್ನ, ಬಿಸಿಬೇಳೆ ಬಾತ್, ಮೆಂತೆ ಪುಲಾವ್ ಮೊದಲಾದ ವೆರೈಟಿ ರೈಸ್ ಬಾತ್ ಸವಿಯಬಹುದು. ಆದರೆ ಒಬ್ಬರಿಗೆ ಒಂದು ಟೋಕನ್ ಮಾತ್ರ ಲಭ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments