Webdunia - Bharat's app for daily news and videos

Install App

ಬದಲಾಗುತ್ತಾ ಇಂದಿರಾ ಕ್ಯಾಂಟೀನ್ ಹೆಸರು ? ಪ್ರಸ್ತಾಪ ಏನು ?

Webdunia
ಶನಿವಾರ, 14 ಆಗಸ್ಟ್ 2021 (09:45 IST)
ಚಿತ್ರದುರ್ಗ(ಆ.14): ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾತ್ವಿಕವಾಗಿ ಇಂಥ ವಿಚಾರಕ್ಕೆ ಹೆಚ್ಚು ಮಹತ್ವ ಕೊಡಬೇಕಾಗಿಲ್ಲ. ಸಚಿವ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಉತ್ತರ ಹೇಳುವುದಾಗಿ ಹೇಳಿದ್ದಾರೆ.

ಇದೇವೇಳೆ ಸರ್ಕಾರದ ಯೋಜನೆಗಳು ವ್ಯಕ್ತಿಗತವಾಗಿರಬಾರದು. ರಾಷ್ಟ್ರೀಯ ಯೋಜನೆಗಳ ಗುರುತು ಪಡೆದುಕೊಳ್ಳಬೇಕು. ನಮ್ಮ ಪ್ರಧಾನಿ ಅವರು ಪ್ರಧಾನ ಮಂತ್ರಿ ಆವಾಜ್ ಯೋಜನೆ ಸೇರಿ ಇತರೆ ಯೋಜನೆ ತಂದಿದ್ದಾರೆ. ಅವು ಸರ್ಕಾರದ ಹೆಸರಿಗೆ ಸೇರುತ್ತವೆ. ಯೋಜನೆಗಳಿಗೆ ರಾಜಮನೆತನದಂತೆ ಮನೆತನದ ಹೆಸರಿಡುವುದು ಸರಿಯಲ್ಲ ಎಂದಿದ್ದಾರೆ.
ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಕುರಿತು ಈಗಾಗಲೇ ಚರ್ಚೆ ಶುರುವಾಗಿದ್ದು, ಬಹಳಷ್ಟು ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಿದರೆ ಬಿಜೆಪಿ ಅವಧಿಯಲ್ಲಿ ವಿವಿಧ ಯೋಜನೆಗಳಿಗೆ ಇಟ್ಟಿರುವ ಹೆಸರುಗಳಿಗೆ ಮಸಿ ಬಳಿದು ಹೋರಾಟ ಮಾಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರು ಬದಲಾಯಿಸುವ ಸುಳಿವು ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹೆಸರನ್ನು ಬೇಕಾದರ ಬಾರ್ಗೆ ಇಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments