Webdunia - Bharat's app for daily news and videos

Install App

ಬದಲಾಗುತ್ತಾ ಇಂದಿರಾ ಕ್ಯಾಂಟೀನ್ ಹೆಸರು ? ಪ್ರಸ್ತಾಪ ಏನು ?

Webdunia
ಶನಿವಾರ, 14 ಆಗಸ್ಟ್ 2021 (09:45 IST)
ಚಿತ್ರದುರ್ಗ(ಆ.14): ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾತ್ವಿಕವಾಗಿ ಇಂಥ ವಿಚಾರಕ್ಕೆ ಹೆಚ್ಚು ಮಹತ್ವ ಕೊಡಬೇಕಾಗಿಲ್ಲ. ಸಚಿವ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಉತ್ತರ ಹೇಳುವುದಾಗಿ ಹೇಳಿದ್ದಾರೆ.

ಇದೇವೇಳೆ ಸರ್ಕಾರದ ಯೋಜನೆಗಳು ವ್ಯಕ್ತಿಗತವಾಗಿರಬಾರದು. ರಾಷ್ಟ್ರೀಯ ಯೋಜನೆಗಳ ಗುರುತು ಪಡೆದುಕೊಳ್ಳಬೇಕು. ನಮ್ಮ ಪ್ರಧಾನಿ ಅವರು ಪ್ರಧಾನ ಮಂತ್ರಿ ಆವಾಜ್ ಯೋಜನೆ ಸೇರಿ ಇತರೆ ಯೋಜನೆ ತಂದಿದ್ದಾರೆ. ಅವು ಸರ್ಕಾರದ ಹೆಸರಿಗೆ ಸೇರುತ್ತವೆ. ಯೋಜನೆಗಳಿಗೆ ರಾಜಮನೆತನದಂತೆ ಮನೆತನದ ಹೆಸರಿಡುವುದು ಸರಿಯಲ್ಲ ಎಂದಿದ್ದಾರೆ.
ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಕುರಿತು ಈಗಾಗಲೇ ಚರ್ಚೆ ಶುರುವಾಗಿದ್ದು, ಬಹಳಷ್ಟು ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಿದರೆ ಬಿಜೆಪಿ ಅವಧಿಯಲ್ಲಿ ವಿವಿಧ ಯೋಜನೆಗಳಿಗೆ ಇಟ್ಟಿರುವ ಹೆಸರುಗಳಿಗೆ ಮಸಿ ಬಳಿದು ಹೋರಾಟ ಮಾಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರು ಬದಲಾಯಿಸುವ ಸುಳಿವು ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹೆಸರನ್ನು ಬೇಕಾದರ ಬಾರ್ಗೆ ಇಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments