Publish Date: Tue, 31 Oct 2023 (11:42 IST)
Updated Date: Tue, 31 Oct 2023 (11:47 IST)
ಮೈಸೂರಿನ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ 12 ಲಕ್ಷ ಜನರಿರುವುದರಿಂದ 12 ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಂದು ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟಿನ್ ಆರಂಭಿಸಲಾಗುವುದು. ಹಸಿವು ಮುಕ್ತ ರಾಜ್ಯವೇ ನಮ್ಮ ಸರಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದಿರಾ ಕ್ಯಾಂಟಿನ್ ಜನಪ್ರಿಯತೆ ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ವಿಪಕ್ಷಗಳಿಗೆ ಬಡವರ ಹಸಿವು ನೀಗಿಸುವುದು ಬೇಕಾಗಿಲ್ಲ. ಕೇವಲ ರಾಜಕೀಯ ಮಾಡುವುದೇ ಅವರ ಕಾಯಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುತಗಳಿಸಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿಪಕ್ಷಗಳ ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.