Webdunia - Bharat's app for daily news and videos

Install App

ಶೋಚನೀಯ ಸ್ಥಿತಿ ತಲುಪಿದ ಇಂದಿರಾ ಕ್ಯಾಂಟೀನ್

Webdunia
ಬುಧವಾರ, 1 ಫೆಬ್ರವರಿ 2023 (16:22 IST)
ಹೊಸದ್ರಲ್ಲಿ ಅಗಸ ಎತೆತ್ತಿ ಒಗೆದಂಗೆ ಇಂದಿರಾ ಕ್ಯಾಂಟೀನ್ ಓಪನ್ ಆಗಿದ್ದೆ ಆಗಿದ್ದು. ಸಿದ್ದರಾಮಯ್ಯ ಕಾಲದಲ್ಲಿ ಹೇಗೋ ನಡೀತಿದ್ದ ಈ ಬಡವರ ಉಪಹಾರ ಮಂದಿರಗಳು ತದನಂತರ ಯಾಕೋ ಭಾರೀ ನಿರ್ಲಕ್ಷ್ಯಕ್ಕೆ ಒಳಗಾಯ್ತು. ಅಲ್ಲದೆ ಈ ವಿಚಾರ ರಾಜಕೀಯ ಕೆಸರೇರಾಚಟಕ್ಕೂ ಸಹ ಕಾರಣವಾಗಿತ್ತು. ಆದ್ರು ಸಹ ಹೇಗೋ ಇಂದಿರಾ ಕ್ಯಾಂಟೀನ್ ಗಳು ನಡೆದುಕೊಂಡು ಅಲ್ಲ, ತೆವಲಿಕೊಂಡು ಕಾರ್ಯಾಚರಣೆ ಮಾಡ್ತಿತ್ತು. ಆದ್ರೆ ಇದೀಗ ಶೋಚನೀಯ ಸ್ಥಿತಿ ತಲುಪಿದೆ.
 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ಗಳನ್ನು ಆರಂಭ ಮಾಡಿದ್ದರು. ಇಂದಿರಾ ಕ್ಯಾಂಟೀನ್ಗಳಲ್ಲಿ ಬಡವರು, ಕೂಲಿಕಾರ್ಮಿಕರು ಊಟ ಮಾಡಿ ಹಸಿವನ್ನು ನೀಗಿಸಿಕೊಳ್ಳುತ್ತಿದ್ದರು. ಆದರೆ ಈಗ ಈ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇಂದಿರಾ ಕ್ಯಾಂಟೀನ್ಗಳು ಮುಚ್ಚು ಹೋಗ್ತಾವಾ ಎಂಬ ಆತಂಕ ಎದುರಾಗಿದೆ. ಏಕೆಂದರೆ ಮೆಜೆಸ್ಟಿಕ್ನ ಇಂದಿರಾ ಕ್ಯಾಂಟೀನ್ ಸೇರಿದಂತೆ ನಗರದ ಹಲವು ಇಂದಿರಾ ಕ್ಯಾಂಟೀನ್ಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜಲಮಂಡಳಿ ವಾಟರ್ ಪೈಪ್ಲೈನ್ ಕಟ್ ಮಾಡಿದ್ದು, ನೀರಿಲ್ಲದೇ ದುಡ್ಡಿಗೆ ಹೊರಗಡೆ ನೀರು ತಂದು ನಡೆಸುತ್ತಿದ್ದಾರೆ.
 
ನಗರದ 8 ವಲಯಗಳಲ್ಲೂ ಇರುವ ಇಂದಿರಾ ಕ್ಯಾಂಟೀನ್ಗಳಲ್ಲಿ ವಾಟರ್ ಬಿಲ್ ಬಾಕಿಯಿದೆ. ಸುಮಾರು 40 ಲಕ್ಷಕ್ಕೂ ಹೆಚ್ಚು ವಾಟರ್ ಬಿಲ್ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಬಿಬಿಎಂಪಿ ಗಮನಕ್ಕೆ ತಂದ್ರು ಬಿಬಿಎಂಪಿ ಬಿಲ್ ಪಾವತಿಸಿ ಸಮಸ್ಯೆ ಕ್ಲಿಯರ್ ಮಾಡುವ ಗೋಜಿಗೆ ಹೋಗಿಲ್ಲ. ಸುಮಾರು ಏಳೇಂಟು ತಿಂಗಳ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟೀನ್ಗೆ ಬರುವ ಗ್ರಾಹಕರು ಕೂಡ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದು, ಊಟ ಚೆನ್ನಾಗಿದೆ ಮೂರು ಟೈಂ ನಾವು ಇಲ್ಲಿಯೇ ಊಟ ಮಾಡುತ್ತೇವೆ. ಆದರೆ ನೀರಿನ ಸಮಸ್ಯೆ ಇದೆ, ಅದನ್ನು ಕ್ಲಿಯರ್ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ.ಹೀಗಾಗಿ ಈ ಸಮಸ್ಯೆಯನ್ನು ಬಿಬಿಎಂಪಿ ಗಂಭೀರವಾಗಿ ಪರಿಗಣಿಸಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments