Select Your Language

Notifications

webdunia
webdunia
webdunia
Friday, 11 April 2025
webdunia

ಇಂದಿರಾಗಾಂಧಿ ಲಂಚ ಪಡೆದು ಜೈಲಿಗೆ ಹೋಗಿಲ್ಲ– ಸಿಎಂ

ಸಿದ್ದರಾಮಯ್ಯ
ಕೊಪ್ಪಳ , ಗುರುವಾರ, 14 ಡಿಸೆಂಬರ್ 2017 (18:50 IST)
ದಿವಂಗತ ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರು ಯಡಿಯೂರಪ್ಪ ಅವರಂತೆ ಲಂಚ ತೆಗೆದುಕೊಂಡ ಕಾರಣಕ್ಕೆ ಜೈಲಿಗೆ ಹೋಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯಡಿಯೂರಪ್ಪ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಕುಷ್ಟಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಸಂದರ್ಭ ಜೈಲಿಗೆ ಹೋಗಬೇಕಾಯಿತು. ಲಂಚ ಪಡೆದು ಜೈಲಿಗೆ ಹೋಗಿಲ್ಲ ಎಂದಿದ್ದಾರೆ.
 
ಯಡಿಯೂರಪ್ಪ ಚೆಕ್ ಮೂಲಕ ಲಂಚ ತೆಗೆದುಕೊಂಡ ಕಾರಣಕ್ಕೆ ಜೈಲಿಗೆ ಹೋದರು. ಇದೇ ಕಾರಣಕ್ಕೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೂಡಾ ಜೈಲಿಗೆ ಹೋದರು. ನಮ್ಮಲ್ಲಿ ಏನಾದರೂ ಹಗರಣಗಳಿದ್ದಾವೆಯೇ? ಎಂದು ಪ್ರಶ್ನಿಸಿದ್ದಾರೆ.
 
ಯಡಿಯೂರಪ್ಪ ಅವರ ವಿರುದ್ಧ 42 ಎಫ್‌ಐಆರ್ ಇವೆ. ಅವುಗಳಿಂದ ಹೊರಬರಲಿ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆಯಲ್ಲಿ ಮೋದಿ, ಜೇಟ್ಲಿಯೊಂದಿಗೆ ಅಮಿತ್ ಷಾ