Webdunia - Bharat's app for daily news and videos

Install App

ಮೆಗ್ಗಾನ್ ಬಳಿಕ ವಿಕ್ಟೋರಿಯಾದಲ್ಲಿ ಅಮಾನವೀಯ ಘಟನೆ.. ಬೆಡ್ ನೀಡದೇ ಅಲೆದಾಡಿಸಿದ್ರಾ ವೈದ್ಯರು..?

Webdunia
ಶನಿವಾರ, 3 ಜೂನ್ 2017 (08:32 IST)
ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗೆ ಬೆಡ್ ನೀಡದೇ ಅಮಾನವೀಯವಾಗಿ ನಡೆಸಿಕೊಂಡ ಆರೋಪ ಕೇಳಿಬಂದಿದೆ.

ಪೈಲ್ಸ್`ನಿಂದ ಬಳಲುತ್ತಿದ್ದ ತುಮಕೂರು ಮೂಲದ ಮೊಹಮ್ಮದ್ ಶಬ್ಬೀರ್ ನಿನ್ನೆ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ಬಂದಿದ್ದರು. ಆದರೆ, ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಬೆಡ್ ನೀಡದೇ ನೆಲದ ಮೇಲೆ ಮಲಗುವಂತೆ ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳುವಂತೆ ರೆಫರ್ ಮಾಡಿದ್ದಾರೆ.

ರೋಗಿಯನ್ನ ಕರೆದುಕೊಂಡು ಕೆ.ಸಿ. ಜನರಲ್`ಗೆ ಹೋದರೆ ಇದು ರೆಫರ್ ಮಾಡಿರುವ ಸ್ಲಿಪ್ ಅಲ್ಲ, ಸ್ವಯಂಪ್ರೇರಿತವಾಗಿ ಡಿಸ್ಚಾರ್ಜ್`ಗೆ ಬರೆಸಿಕೊಂಡಿರುವ ಸ್ಲಿಪ್ ಎಂದು ಹೇಳಿದ್ದಾರೆ. ಅಡ್ಮಿಸನ್`ಗೆ ನಿರಾಕರಿಸಿದ್ದಾರೆ.

ಇದರಿಂದ ಆಘಾತಗೊಂಡ ರೋಗಿಯ ಸಂಬಧಿಕರು ಬಳಿಕ ಮರಳಿ ವಿಕ್ಟೋರಿಯಾ ಆಸ್ಪತ್ರೆಗೆ ರೋಗಿಯನ್ನ ಕರೆ ತಂದಿದ್ದಾರೆ. ಅಡ್ಮಿಟ್ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಆದರೂ ಬೆಡ್ ನೀಡದ ವೈದ್ಯರು ಮಾಧ್ಯಮ ಪ್ರತಿನಿಧಿಗಳನ್ನ ಕಂಡು ಬೆಡ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments