Select Your Language

Notifications

webdunia
webdunia
webdunia
webdunia

ನಿರಪರಾಧಿಗಳನ್ನು ಅಪರಾಧಿಯಾಗಿ ಮಾಡಬೇಡಿ: ಜಾರ್ಜ್ ಮನವಿ

ನಿರಪರಾಧಿ
ಬೆಂಗಳೂರು , ಸೋಮವಾರ, 18 ಜುಲೈ 2016 (19:36 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
 
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಅಧಿಕಾರಕ್ಕೆ ಅಂಟಿಕೊಂಡುವ ಕೂರುವ ವ್ಯಕ್ತಿಯಲ್ಲ. ಪ್ರಕರಣ ಕುರಿತಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ನಿಷ್ಪಕ್ಷಪಾತ ತನಿಖೆಯ ನಂತರ ಸತ್ಯಾಸತ್ಯತೆ ಹೊರ ಬರಲಿದೆ. ಅಲ್ಲಿಯವರೆಗೆ ನಿರಪರಾಧಿಗಳನ್ನು ಅಪರಾಧಿಯಾಗಿ ಮಾಡಬೇಡಿ ಎಂದು ಮನವಿ ಮಾಡಿದರು.
 
ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಸೂಚಿಸಿರುವ ಹಾಗೇ ತನಿಖೆ ನಡೆಯಲಿ. ನನ್ನ ಸ್ವಯಂ ನಿರ್ಧಾರದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ್ದೇನೆ. ಹಾಗೂ ಪ್ರಕರಣ ಕುರಿತು ನಾನೂ ಕಾನೂನು ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಪತಿ ಅವರ ಪತ್ನಿ ಪಾವನಾ ಮತ್ತು ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: ವಹಿವಾಟಿನ ಮುಕ್ತಾಯಕ್ಕೆ 90 ಪಾಯಿಂಟ್‌ಗಳ ಕುಸಿತ ಕಂಡ ಸೂಚ್ಯಂಕ