Webdunia - Bharat's app for daily news and videos

Install App

ತಿಂಗಳಾಂತ್ಯದೊಳಗಾಗಿ ಕಿಯೋಸ್ಕ್ ಯಂತ್ರಗಳ ಅಳವಡಿಸಿ ಎಂದ ಆರ್ ಸಿ

Webdunia
ಮಂಗಳವಾರ, 13 ನವೆಂಬರ್ 2018 (18:39 IST)
ಕಲಬುರಗಿ ವಿಭಾಗದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 70 ಗ್ರಾಮ ಪಂಚಾಯಿತಿಗಳಲ್ಲಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸುವ ಯೋಜನೆಯನ್ನು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿವತಿಯಿಂದ ಹಮ್ಮಿಕೊಳ್ಳಲಾಗಿದೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯ ಆಯ್ದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ ಅಂತ್ಯದೊಳಗಾಗಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಿ ಅವು ಕಾರ್ಯನಿರ್ವಹಿಸುವಂತಾಗಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗದ ಗ್ರಂಥಾಲಯ ಅಧಿಕಾರಿಗಳ ಹಾಗೂ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ 35, ಬೀದರ ಜಿಲ್ಲೆಯಲ್ಲಿ 15, ಯಾದಗಿರಿ ಜಿಲ್ಲೆಯಲ್ಲಿ 15 ಹಾಗೂ ರಾಯಚೂರು ಜಿಲ್ಲೆಯಲ್ಲಿ 5 ಗ್ರಾಮ ಪಂಚಾಯಿತಿಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ ಎಂದರು.
ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಮುಂದಿನ 7 ದಿನದೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 7500 ರೂ.ಗಳನ್ನು ನೀಡಲಾಗಿದೆ. ಗ್ರಂಥಾಲಯ ಅಧಿಕಾರಿಗಳು ಮುತುವರ್ಜಿವಹಿಸಿ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ದೂರವಾಣಿ ಹಾಗೂ ಇಂಟರ್‍ನೆಟ್ ಸಂಪರ್ಕ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕಿಯೋಸ್ಕ್ ಯಂತ್ರದ ಮೂಲಕ ಗ್ರಾಮೀಣ ಪ್ರದೇಶದ ಜನರು ಎಲ್ಲ ಮಾಹಿತಿಗಳನ್ನು ಪಡೆಯಲು ಸಾಧ್ಯವಾಗುತ್ತದೆ. ದಾಖಲೆಗಳ ಜಿರಾಕ್ಸ್ ಮತ್ತು ಪ್ರಿಂಟ್ ಸಲುವಾಗಿ ಅಲ್ಪ ಪ್ರಮಾಣದ ಶುಲ್ಕ ಪಡೆಯುವ ಮೂಲಕ ಯಂತ್ರ ಮತ್ತು ಇತರೆ ಉಪಕರಣಗಳ ನಿರ್ವಹಣೆ ಮಾಡಬಹುದಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments