Webdunia - Bharat's app for daily news and videos

Install App

ಪ್ರತಿಮಾ ಕೊಲೆ ವಿಚಾರವಾಗಿ ಮುನಿರತ್ನರನ್ನ ತನಿಖೆ ಮಾಡಬೇಕೆಂದು ಒತ್ತಾಯ

Webdunia
ಸೋಮವಾರ, 6 ನವೆಂಬರ್ 2023 (15:30 IST)
ಭೂವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಮುನಿರತ್ನ ಅವರನ್ನ ತನಿಖೆಗೆ ಒಳಪಡಿಸುವಂತೆ ಕೆಪಿಸಿಸಿ ಕಾನೂನು ಘಟಕದ ಸೂರ್ಯ ಮುಕುಂದರಾಜ್ ಒತ್ತಾಯ ಮಾಡಿದ್ದಾರೆ.
 
ಸಾಮಾಜಿಕ ಜಾಲತಾಣದ ಮೂಲಕ ಪೊಲೀಸ್ ಇಲಾಖೆಗೆ ಒತ್ತಾಯ ಮಾಡಿದ್ದು,ಮಾಜಿ ಸಚಿವ ಮುನಿರತ್ನ ಮೇಲಿನ ಪ್ರಕರಣದ ಪತ್ರಗಳನ್ನು ಉಲ್ಲೇಖಿಸಿ ಪೊಸ್ಟ್ ಮಾಡಿದ್ದಾರೆ.ಹುಣಸೆಮಾರನಹಳ್ಳಿ ಬಳಿ ಪರವಾನಗಿ ಪಡೆಯದೆ ಬಂಡೆಗಳ ಸ್ಪೋಟಗೊಂಡಿದೆ.ಈ ಸಂಬಂಧ ವರದಿ ತಯಾರಿಸಿ ಕಳೆದ ಜುಲೈನಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರತಿಮಾ ವರದಿ ನೀಡಿದ್ದಳು.
 
ಹುಣಸಮಾರನಹಳ್ಳಿಯಲ್ಲಿ ಪರವನಾಗಿ ಇಲ್ಲದೆ ಕಲ್ಲು ಬಂಡೆಗಳನ್ನ ಸ್ಪೋಟಿಸಲಾಗಿದೆ.ಹಾಗೂ ಕಲ್ಲು ಸಾಗಾಟ ಮಾಡಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ರಾಜಧನ ನಷ್ಟ ಉಂಟು ಮಾಡಿದ್ದಾರೆ ಎಂದು ವರದಿಯಲ್ಲಿ ಮುನಿರತ್ನ ಬಗ್ಗೆ ಆರೋಪಿಸಲಾಗಿದೆ.ಈ ಸಂಬಂಧ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ಸಹ ದಾಖಲು ಮಾಡಲಾಗಿತ್ತು.ಈಗ ಪ್ರತಿಮಾ ಹತ್ಯೆಯಾಗಿದೆ.

ಪೊಲೀಸರು ಮುನಿರತ್ನಗು ನೋಟಿಸ್ ನೀಡಿ ವಿಚಾರಣೆಗೆ ಕರೆಯಬೇಕು‌.ಇವರನ್ನು ಕೂಡ ತನಿಖೆಗೆ ಒಳಪಡಿಸಬೇಕು ಅಂತಾ ಒತ್ತಾಯ ಮಾಡಿದ್ದಾರೆ.ಪೊಲೀಸರು ಒಂದು ಕೊಲೆ ಕೇಸಲ್ಲಿ ಹಲವು ಆಯಾಮಗಳಲ್ಲಿ ತನಿಖೆ ಮಾಡ್ತಾರೆ.ಈಗ ಈ ಒಂದು ಆಯಾಮದಲ್ಲೂ ಕೂಡ ತನಿಖೆ ನಡೆಸುವಂತೆ ಕೆಪಿಸಿಸಿ ಕಾನೂನು ಘಟಕದ ಸೂರ್ಯ ಮುಕುಂದರಾಜ್ ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments