Webdunia - Bharat's app for daily news and videos

Install App

ವಾಹನ ಸಂಚಾರದ ವೇಳೆ ತಪಾಸಣೆ

Webdunia
ಶುಕ್ರವಾರ, 13 ಆಗಸ್ಟ್ 2021 (20:40 IST)
ವಾಹನ ಸಂಚಾರದ ವೇಳೆ ತಪಾಸಣೆ ನಡೆಸುವ ಶೇ. 50 ರಷ್ಟು ಸಂಚಾರ ಪೆÇಲೀಸರಿಗೆ ಶೀಘ್ರದಲ್ಲೇ ಬಾಡಿ ಒನ್ ಕ್ಯಾಮರಾ ಕೊಡಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೆÇಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ. 
ಪೆÇಲೀಸರ ಭ್ರಷ್ಟಾಚಾರ ತಡೆಗೆ ತಪಾಸಣೆ ನಡೆಸುವವರಿಗೆ ಬಾಡಿ ಓನ್? ಕ್ಯಾಮರಾ ನೀಡಬೇಕು ಎಂದು ಹಿಂದಿನಿಂದಲೂ ಸಾರ್ವಜನಿಕರು ಒತ್ತಾಯಿಸುತ್ತ ಬಂದಿದ್ದರು. ಇದರ ಭಾಗವಾಗಿ ಕೆಲವರಿಗೆ ಬಾಡಿ ಓನ್ ಕ್ಯಾಮರಾ ನೀಡಿದ್ದರೂ ಪೂರ್ಣ ಪ್ರಮಾಣದಲ್ಲಿ ನೀಡಲಾಗಿರಲಿಲ್ಲ. ಇದೀಗ ಶೇ. 50ರಷ್ಟು ಟ್ರಾಫಿಕ್ ಪೆÇಲೀಸರಿಗೆ ಕ್ಯಾಮರಾ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. 
ಬೆಂಗಳೂರು ಸಂಚಾರ ಪೆÇಲೀಸರ ಅಧಿಕೃತ ಫೇಸ್?ಬುಕ್ ಖಾತೆಯಲ್ಲಿ ಲೈವ್ ಬಂದ ಅವರು ಸಾರ್ವಜನಿಕರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ ಈ ವಿಷಯ ತಿಳಿಸಿದರು. ಮತ್ತಷ್ಟು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪೆÇಲೀಸರು ಸಾರ್ವಜನಿಕರ ಜತೆ ಕಟುವಾಗಿ ವರ್ತಿಸಬಾರದು. ಕಾನೂನು ಉಲ್ಲಂಘಿಸಿದವರೊಂದಿಗೆ ಸೌಜನ್ಯದಿಂದಲೇ ವರ್ತಿಸಿ ದಂಡ ವಿಧಿಸಬೇಕು. ಒಂದುವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು. ಸೌಜನ್ಯದಿಂದ ವರ್ತಿಸುವ ಕುರಿತು ಪೆÇಲೀಸರಿಗೆ ಅದರಲ್ಲೂ ಹೊಸದಾಗಿ ನೇಮಕಗೊಂಡವರಿಗೆ ಸಾಫ್ಟ್ ? ಸ್ಕಿಲ್ಸï? ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪೆÇಲೀಸರು ಸುಖಾಸುಮ್ಮನೆ ತಡೆದು ಪರಿಶೀಲಿಸುತ್ತಾರೆ ಎಂದು ಸಾರ್ವಜನಿಕರೊಬ್ಬರು ದೂರಿದ್ದಕ್ಕೆ, ಸಾಮಾನ್ಯವಾಗಿ ಪೆÇಲೀಸರು ಎರಡು ರೀತಿಯ ತಪಾಸಣೆ ಮಾಡುತ್ತಾರೆ ಎಂದ ಅವರು, ಕಣ್ಣಿಗೆ ಕಾಣಿಸುವಂಥ ಸಂಚಾರ ನಿಯಮ ಉಲ್ಲಂಘನೆ ಇರದಿದ್ದರೆ ತಡೆಯಬಾರದು. ಆದರೆ ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಹಾಗೂ ಹಳೆಯ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡುವ ಸಲುವಾಗಿ ತಡೆದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ದೀರ್ಘಾವಧಿ ಸಿಎಂ ದಾಖಲೆ ಬೆನ್ನಲ್ಲೇ ಹೊಸ ಆಸೆ ತಿಳಿಸಿದ ಸಿದ್ದರಾಮಯ್ಯ

ಟ್ರಂಪ್ ನಮ್ಮ ಪ್ರಧಾನಿ ಮೋದಿಯನ್ನೂ ಹೀಗೇ ಕಿಡ್ನ್ಯಾಪ್ ಮಾಡ್ತಾರಾ: ಕೈ ನಾಯಕ ಪೃಥ್ವಿರಾಜ್ ಚೌಹಾಣ್ ಮತ್ತೆ ವಿವಾದ

ಸಿದ್ದರಾಮಯ್ಯರಿಲ್ಲದ ಕಾಂಗ್ರೆಸ್, ಸರ್ಕಾರ ಊಹಿಸಲು ಸಾಧ್ಯವಿಲ್ಲ: ಮಹದೇವಪ್ಪ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ ಮೇಲಲ್ಲ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments