Webdunia - Bharat's app for daily news and videos

Install App

ರಾಜ್ಯಕ್ಕೆ ನ್ಯಾಯ ಸಿಗುವ ಬದಲು ಶಿಕ್ಷೆ ಸಿಕ್ಕಿದೆ: ದೇವೇಗೌಡ

Webdunia
ಸೋಮವಾರ, 12 ಸೆಪ್ಟಂಬರ್ 2016 (17:19 IST)
ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮೇಲ್ಮನವಿಗೆ ನ್ಯಾಯ ಸಿಗುವ ಬದಲು ಶಿಕ್ಷೆ ಸಿಕ್ಕಿದೆ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪಿನ ನಂತರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲಿಸಿ ಎಂದು ನಾನೇ ಹೇಳಿದ್ದೇನೆ. ಕರ್ನಾಟಕ ಪರ ವಕೀಲ ನಾರಿಮನ್, ಅನಿಲ್ ದಿವಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಚರ್ಚಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ವ್ಯಕ್ತಪಡಿಸಲು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಇದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.  ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹಕ್ಕು ಎಂದು ಸುಪ್ರೀಂ ಹೇಳಿತ್ತು ಎಂದರು. 
 
ವೈಮಾನಿಕ ಸಮೀಕ್ಷೆ ಮಾಡಿ ನೋಡಿದ್ದೇನೆ. ರಾಜ್ಯದಲ್ಲಿ ಬೇಸಾಯ ಹಾಗೂ ಕುಡಿಯುವ ನೀರಿಗೂ ಆತಂಕವಿದೆ. ನಾನು ನೀರು ಬಿಡಿ ಎಂದು ಹೇಳಿ ಮನೆಯಲ್ಲಿ ಕೂರಲಿಲ್ಲ. ವಾಸ್ತವ ಸ್ಥಿತಿ ಕುರಿತು ಎಲ್ಲರನ್ನು ಭೇಟಿಯಾಗಿ ವಿವರಿಸಿದ್ದೇನೆ. ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹ ಕುರಿತು ರಾಜ್ಯದ ಪರ ವಕೀಲರು ನೀಡಿರುವ ಮಾಹಿತಿ ಕುರಿತು ಅನುಮಾನವಿದ್ದರೆ ಪರಿಶೀಲನೆ ನಡೆಸಬಹುದಿತ್ತು ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments