ಸಚಿವರ ಖಾತೆ ಹಂಚಿಕೆ; ಇಲ್ಲಿದೆ ನೋಡಿ ಮಾಹಿತಿ

Webdunia
ಗುರುವಾರ, 21 ಜನವರಿ 2021 (11:56 IST)
ಬೆಂಗಳೂರು : ಇಂದು 7 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದು ಈ ಹಿನ್ನಲೆಯಲ್ಲಿ ಸಂಪುಟದ ಕೆಲವು ಸಚಿವರ ಖಾತೆ ಅದಲು ಬದಲು ಮಾಡಲಾಗಿದೆ.

ಈಗಾಗಲೇ ರಾಜಭವನಕ್ಕೆ ಸಚಿವರ ಸಂಭಾವ್ಯ ಖಾತೆ ಪಟ್ಟಿ ಕಳುಹಿಸಲಾಗಿದ್ದು, ಇಂದು ಖಾತೆ ಹಂಚಿಕೆ ಮಾಡಲಾಗುವುದು ಎನ್ನಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮೊದಲು ಗೋಪಾಲಯ್ಯ ನಿರ್ವಹಿಸುತ್ತಿದ್ದು, ಈಗ ಅದನ್ನು ಉಮೇಶ್ ಕತ್ತಿ ಅವರಿಗೆ ನೀಡಲಾಗುವುದು. ಮೀನುಗಾರಿಕಾ ಮತ್ತು ಬಂದರು, ಒಳನಾಡು ಜಲಸಾರಿಗೆ ಮೊದಲು ಕೋಟ ಶ್ರೀನಿವಾಸ ಪೂಜಾರಿ ಬಳಿ ಇದ್ದು ಇದೀಗ ಎಸ್.ಅಂಗಾರ ಅವರಿಗೆ ನೀಡಲಾಗುವುದು. ಕಾನೂನು ಮತ್ತು ಸಂಸದೀಯ ಖಾತೆ ಜೆಸಿ ಮಾಧುಸ್ವಾಮಿಯಿಂದ ಬಸವರಾಜ ಬೊಮ್ಮಾಯಿಗೆ ನೀಡಲಾಗುವುದು.

ವೈದ್ಯಕೀಯ ಶಿಕ್ಷಣ ಖಾತೆ. ಸುಧಾಕರ್ ಅವರಿಂದ ಮಾಧುಸ್ವಾಮಿಗೆ ನೀಡಲಾಗುವುದು, ಕನ್ನಡ ಸಂಸ್ಕೃತಿ ಖಾತೆ ಸಿಎಂ ಬಿಎಸ್ ವೈ ಯಿಂದ ಮಾಧುಸ್ವಾಮಿಗೆ ನೀಡಲಾಗುವುದು. ಹಜ್ ಮತ್ತು ವಕ್ಫ್ ಖಾತೆ ಪ್ರಭು ಚೌಹಾಣ್ ರಿಂದ ನಾರಾಯಣಗೌಡರಿಗೆ ನೀಡಲಾಗುವುದು. ತೋಟಗಾರಿಕೆ ನಾರಾಯಣಗೌಡರಿಂದ ಗೋಪಾಲಯ್ಯಗೆ ನೀಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments