ಡಿಕೆಶಿಯಿಂದ ಶಿಕ್ಷಣ ನೀತಿ ರೂಪಿಸಿದ ತಜ್ಞರಿಗೆ, ಶಿಕ್ಷಕರಿಗೆ ಅಪಮಾನ

Webdunia
ಭಾನುವಾರ, 5 ಸೆಪ್ಟಂಬರ್ 2021 (20:46 IST)
ಬೆಂಗಳೂರು: ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ)ಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿತನದಿಂದ ಕೂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದರು. 
 
ಬೆಂಗಳೂರಿನಲ್ಲಿ ಭಾನುವಾರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಶಿಕ್ಷಣ ನೀತಿಯ ಬಗ್ಗೆ ತಿಳಿದವರು, ಅದರ ಬಗ್ಗೆ ಅಧ್ಯಯನ ಮಾಡಿದವರು ಹೀಗೆ ಮಾತನಾಡುವುದಿಲ್ಲ. ಅರಿವು, ತಿಳಿವಳಿಕೆ ಇರುವವರು ಹೀಗೆ ಮಾತನಾಡಲು ಸಾಧ್ಯವೇ ಇಲ್ಲ. ಕೇವಲ ರಾಜಕೀಯ ಉದ್ದೇಶಕ್ಕಾಗಿ ಮಾತ್ರ ಇಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು. 
 
ನಮ್ಮ ದೇಶದ ಮಹಾನ್ ಜ್ಞಾನಿಗಳು, ವಿದ್ವಾಂಸರು, ಶಿಕ್ಷಣ ತಜ್ಞರು ರೂಪಿಸಿರುವ ಈ ನೀತಿಯನ್ನು ಡಿ.ಕೆ.ಶಿವಕುಮಾರ್ ಅವರು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದು ಕರೆಯಬಾರದಿತ್ತು. ಶಿಕ್ಷಕರ ದಿನಾಚರಣೆ ವೇಳೆಯಲ್ಲಿ ಹಾಗೆ ಕರೆಯುವ ಮೂಲಕ ಜ್ಞಾನಕ್ಕೆ, ಅದನ್ನು ಬೋಧಿಸುವ ಶಿಕ್ಷಕ ಸಮುದಾಯಕ್ಕೆ, ಶಿಕ್ಷಣ ನೀತಿಯನ್ನು ವರ್ಷಗಳ ಕಾಲ ಶ್ರಮಿಸಿ ರೂಪಿಸಿದವರಿಗೆ ಅಪಮಾನ ಮಾಡಿದ್ದಾರೆ. ಅವರು ಹೇಳಿಕೆ ನೀಡುವ ಮುನ್ನ ಒಮ್ಮೆ ಆಲೋಚನೆ ಮಾಡಬೇಕು. ಇಲ್ಲವಾದರೆ ಅವರ ಟೀಕೆಗಳು ಅವರಿಗೇ ತಿರುಗುಬಾಣವಾಗುತ್ತವೆ ಎಂದು ಸಚಿವರು ಅಭಿಪ್ರಾಯಪಟ್ಟರು. 
 
ಕೆಪಿಸಿಸಿ ಅಧ್ಯಕ್ಷರ ಟೀಕೆ, ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಶಿಕ್ಷಣ ನೀತಿಯಲ್ಲಿ ಏನಾದರೂ ನ್ಯೂನತೆ ಇದ್ದರೆ ಎತ್ತಿ ತೋರಿಸುವ ಕೆಲಸವನ್ನು ಅವರು ಮಾಡಬೇಕಿತ್ತು. ಅದರಲ್ಲಿ ನ್ಯೂನತೆ ಇದ್ದರೆ ತಾನೇ ಅವರು ಹೇಳಲಿಕ್ಕೆ. ಆದರೆ, ಅವರು ಅನಗತ್ಯ ಅಂಶಗಳನ್ನು ಪ್ರಸ್ತಾವನೆ ಮಾಡುವ ಮೂಲಕ ತಮಗೆ ತಿಳಿವಳಿಕೆ ಕೊರತೆ ಇದೆ ಎಂಬುದನ್ನು ತೋರಿಸಿಕೊಂಡಿದ್ದಾರೆ. ಹಿಂದಿ ಹೇರುವ ಹುನ್ನಾರ ಎನ್ನುವುದು ಕೂಡ ಬಾಲಿಶ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 
 
ಡಿ.ಕೆ.ಶಿವಕುಮಾರ್ ಶಿಕ್ಷಣ ನೀತಿಯ ಬಗ್ಗೆ ಯಾರಿಂದಲಾದರೂ ಮಾಹಿತಿ ಪಡೆದುಕೊಂಡು ಮಾತನಾಡಲಿ. ಇಲ್ಲವೇ ನಾನೇ ಮಾಹಿತಿ ಕೊಡುತ್ತೇನೆ ಎಂದ ಸಚಿವರು, ಶಿಕ್ಷಣ ನೀತಿಯಂಥ ದೇಶ ಕಟ್ಟುವ ವಿಷಯಗಳ ಬಗ್ಗೆ ರಾಜಕೀಯ ಮಾಡಬಾರದು ಎಂದು ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments