Webdunia - Bharat's app for daily news and videos

Install App

ವಂಚಕ ಸಿಪಿ ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ: ಎಚ್‌ ವಿಶ್ವನಾಥ್

Sampriya
ಬುಧವಾರ, 23 ಅಕ್ಟೋಬರ್ 2024 (16:21 IST)
Photo Courtesy X
ಮೈಸೂರು: ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಸಿಪಿ ಯೋಗೇಶ್ವರ್  ಒಬ್ಬ ವಂಚಕ, ಆತನನ್ನು ಸೈನಿಕ ಎಂದು ಕರೆಯಬಾರದು. ಆ ರೀತಿ ಕರೆದರೆ ಸೈನಿಕರಿಗೆ ಅಪಮಾನವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಬುಧವಾರ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೈನಿಕ ಕುಲಕ್ಕೆ ಯೋಗೇಶ್ವರ್ ಅಪಮಾನ ಮಾಡಿದ್ದಾನೆ. ಅವನನ್ನು ಸೈನಿಕ ಅಂತ ಕರೆಯಬಾರದು ಎಂದು ಗುಡುಗಿದರು.

ಮುಡಾ, ವಾಲ್ಮೀಕಿ ವಂಚನೆ ಜತೆಗೆ ಇದೀಗ ಮೂರನೇ ಫ್ರಾಡ್ ಆಗಿರುವ ಯೋಗೇಶ್ವರ್‌ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆಯಿಂದ ಯಾವುದೇ ರಾಜಕೀಯ ಬದಲಾವಣೆ ಆಗುವುದಿಲ್ಲ ಎಂದರು.

ಜೈಲಿಗೆ ಹೋಗಿ ಬಂದ ಒಬ್ಬ ಮಂತ್ರಿಗೆ ಮೈಸೂರುಪೇಟ, ಹಾರ ಹಾಕಿ ಸ್ವಾಗತ ಮಾಡಿದ್ದೀರಿ. ನಿಮ್ಮನ್ನು ವಾಲ್ಮೀಕಿ ಸಮುದಾಯದ ಜನರು ನಂಬುವುದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಭೈರತಿ ಸುರೇಶ್ ನಂತಹ ಅಯೋಗ್ಯನನ್ನು ಮಂತ್ರಿ ಮಾಡಿಕೊಂಡು ರಾಜ್ಯಕ್ಕೆ ಮಸಿ ಬಳಿದಿದ್ದೀರಿ ಎಂದು ಸಿಎಂ ವಿರುದ್ಧ ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments