ವಾಹನಗಳ ಚೆಸ್ಸಿ ನಂಬರ್ ಬದಲಿಸೋ ಅಂತಾರಾಜ್ಯ ಕಳ್ಳರ ಬಂಧನ

Webdunia
ಗುರುವಾರ, 20 ಅಕ್ಟೋಬರ್ 2016 (14:29 IST)

ಬೆಳಗಾವಿ: ದ್ವಿ ಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಮೇಲೆ ಸಾಲ ಪಡೆದು ಚೆಸ್ಸಿ ನಂಬರ್ ಬದಲಾಯಿಸಿ ಬೇರೊಬ್ಬರಿಗೆ ಮಾರಾಟ ಮಾಡುತ್ತಿದ್ದ ವಂಚಕ ಜಾಲವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
 

ಆರೋಪಿಗಳಿಂದ ವಶಪಡಿಸಿಕೊಂಡ ವಾಹನಗಳ ಜತೆ ಎಸ್ಪಿ ರವಿಕಾಂತೇಗೌಡ ಮತ್ತು ಸಿಬ್ಬಂದಿ.

 ವಾಸುದೇವ ನಾಯಕ, ಚಂದ್ರಕಾಂತ ಗಾಡಿವಡ್ಡರ, ಮಹೇಶ ಗಾಡಿವಡ್ಡರ, ಉಸ್ಮಾನ್ ಮನಿಯಾರ್, ಮಹಾವೀರ ಗಾಡಿವಡ್ಡರ, ಪ್ರಭಾಕರ ಪೋಳ, ವಿನಾಯಕ ಪೋಳ, ರಾಮಪ್ಪ ಗಾಣಿಗೇರ ಎಂಬುವರೇ ಬಂಧೀತ ಆರೋಪಿಗಳಾಗಿದ್ದಾರೆ. ಒಟ್ಟು ಎಂಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮೂರು ಜನರು ಪರಾರಿಯಾಗಿದ್ದಾರೆ. ಬಂಧಿತರಿಂದ ಆರು ಟ್ರ್ಯಾಕ್ಟರ್, 4 ಬುಲೆರೋ ಹಾಗೂ ಮ್ಯಾಕ್ಸಿ ಕ್ಯಾಬ್, ಒಂದು ಬೋಲ್ಟ್, ಒಂದು ಮಹಿಂದ್ರಾ ಕಾರ್, ಮೂರು ಬುಲೆರೋ, ನಾಲ್ಕು ಗೂಡ್ಸ್ ಸೇರಿದಂತೆ 1.6 ಕೋಟಿ ಮೌಲ್ಯದ 19 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಜತೆಗೆ ಫೇಖ್ ದಾಖಲಾತಿ ತಯಾರಿಸಲು ಉಪಯೋಗಿಸುತ್ತಿದ್ದ ಕಂಪ್ಯೂಟರ್, ಪ್ರಿಂಟರ್ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

ಬಂಧಿತ ಆರೋಪಿಗಳು ಬಾಗಲಕೋಟೆ, ವಿಜಯಪುರ, ಗದಗ, ಹುಬ್ಬಳ್ಳಿ, ರಾಯಚೂರು ಸೇರಿದಂತೆ ವಿವಿಧ ಭಾಗಗಳಲ್ಲಿ ತಮ್ಮ ವಂಚನೆ ಜಾಲವನ್ನು ಬೀಸಿದ್ದರು. ಕಳುವು ಮಾಡಿದ ವಾಹನಗಳ ಚೆಸ್ಸಿ ನಂಬರ್ ಬದಲಾಯಿಸಿ, ಅದಕ್ಕೆ ಪೂರಕವಾದ ಸುಳ್ಳು ದಾಖಲಾತಿಗಳನ್ನು ತಾವೇ ತಯಾರಿಸುತ್ತಿದ್ದರು. ನಂತರ ವಿವಿಧ ಹಣಕಾಸು ಸಂಸ್ಥೆಗಳಿಂದ ವಾಹನಗಳ ಮೇಲೆ ಸಾಲ ಪಡೆದು, ಕೆಲ ದಿನಗಳ ಕಾಲ ಓಡಿಸಿ ಎಲ್ಲೆಂದರಲ್ಲಿ ಬಿಟ್ಟು ಪರಾರಿಯಾಗುತ್ತಿದ್ದರು. ಅಥವಾ ಬೇರೆಯವರಿಗೆ ಮಾರಾಟ ಮಾಡುತ್ತಿದ್ದರು.

 

ವಂಚಕರ ಜಾಡು ಹಿಡಿದು ಹೊರಟ ಬೆಳಗಾವಿ ಎಸ್.ಪಿ. ರವಿಕಾಂತೇಗೌಡ ಮತ್ತವರ ತಂಡ ಎಂಟು ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧೀತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಗೋವಾ, ತಮಿಳುನಾಡು, ಆಂಧ್ರಪ್ರದೇಶಗಳಿಗೂ ಜಾಲ ವ್ಯಾಪಿಸಿರುವುದು ಬೆಳಕಿಗೆ ಬಂದಿದೆ. ಸಂಬಂಧಿಸಿ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರೆಬೆತ್ತಲೆ ಪ್ರತಿಭಟನೆ ಇಂಡಿ ಒಕ್ಕೂಟದಲ್ಲೇ ಅಸಮಾಧಾನವಿದ್ದರೂ ದೇಶಕ್ಕಾಗಿ ಈ ಪ್ರತಿಭಟನೆ ಎಂದು ಸಮರ್ಥಿಸಿದ ಖರ್ಗೆ

ಸಂಜೆ ಹೊತ್ತು ಯಾಕೆ ಉಗುರು ಕಟ್ ಮಾಡಬಾರದು ಗೊತ್ತಾ, ಅಸಲಿ ಕಾರಣ ಇಲ್ಲಿದೆ

ಯಮಸ್ವರೂಪಿ ಹಿಮಪಾತಕ್ಕೆ ಬೆಚ್ಚಿದ ಅಮೆರಿಕ: ತುರ್ತು ಪರಿಸ್ಥಿತಿ ಘೋಷಣೆ, ‌ಜನಜೀವನ ಅಸ್ತವ್ಯಸ್ತ

ವಿಧಾನಸಭೆ ಚುನಾವಣೆಗೆ ಮುನ್ನ ಅಚ್ಚರಿಯ ನಿರ್ಧಾರ ಕೈಗೊಂಡ ಕೇರಳ ಸಿಎಂ ಪಿಣರಾಯಿ ವಿಜಯನ್‌

ಶರ್ಟ್ ರಹಿತ ಪ್ರತಿಭಟನೆ ವೇಳೆ ಕಾಂಗ್ರೆಸ್ ಯುವ ಮುಖಂಡನಿಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments