ಬಡ್ಡಿ ದಂಧೆಕೋರನ ಅರೆಸ್ಟ್: ಪಿಸ್ತೂಲ್ ವಶ

Webdunia
ಗುರುವಾರ, 10 ಜನವರಿ 2019 (18:57 IST)
ದುಬಾರಿ ಬಡ್ಡಿಗೆ ಒತ್ತಾಯ ಮಾಡಿ ಕೊಲೆಗೆ ಯತ್ನಿಸಿದ ಶ್ರೀಹರಿ ಎಂಟರ್ಪ್ರೈಸಸ್ ಮಾಲೀಕ ಉದಯ್ ಶೆಟ್ಟಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಪಿಸ್ತೂಲ್, 4 ಗುಂಡುಗಳು, ಜಿಂಕೆ ಕೊಂಬುಗಳು, ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವಿಲ್ಸನ್ ಗಾರ್ಡನ್ 4ನೇ ಕ್ರಾಸ್ ಉದಯ್ ಗೋಪಾಲ್ ಶೆಟ್ಟಿ (54), ಶ್ರೀಹರಿ ಎಂಟರ್ಪ್ರೈಸಸ್ ನಡೆಸುತ್ತಿದ್ದು, ಬಡ್ಡಿಗೆ ಹಣ ನೀಡುತ್ತಿದ್ದ. ಸಂಜಯ್ ನಗರದ ಅಬ್ದುಲ್ ರೆಹಮಾನ್ ಎಂಬುವವರಿಗೆ ಸಾಲವಾಗಿ ಹಣ ನೀಡಿದ್ದು, ಅಸಲು, ಬಡ್ಡಿಯನ್ನು ತೀರಿಸಿದ್ದರೂ, ದುಬಾರಿ ಬಡ್ಡಿಗೆ ಕಿರುಕುಳ ನೀಡುತ್ತಿದ್ದ.

ದುಬಾರಿ ಬಡ್ಡಿ ನೀಡದಿದ್ದರಿಂದ ಅಬ್ದುಲ್ ರೆಹಮಾನ್ ಅವರ ಮನೆಗೆ ಅಕ್ರಮವಾಗಿ ನುಗ್ಗಿ ಪಿಸ್ತೂಲ್ನಿಂದ ಜೀವ ಬೆದರಿಕೆ ಹಾಕಿದ್ದ. ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತರು, ಸಿಸಿಬಿಗೆ ವರ್ಗಾಯಿಸಿದ್ದರು.

ಸಂಬಂಧ ತನಿಖೆ ತೀವ್ರಗೊಳಿಸಿ, ಉದಯ್ ಗೋಪಾಲ್ ಶೆಟ್ಟಿ ಅವರನ್ನು ಬಂಧಿಸಿ, 5.76 ಸಾವಿರ ನಗದು, ಪಿಸ್ತೂಲ್, 4 ಜೀವಂತ ಗುಂಡುಗಳು, ಖಾಲಿ ಚೆಕ್ಗಳು, ಬಾಂಡ್ ಪೇಪರ್ಗಳು, ಜಮೀನಿನ ದಾಖಲಾತಿಗಳು, ಜೊತೆಗೆ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಆರೋಪಿಯು ಶ್ರೀಹರಿ ಎಂಟರ್ಪ್ರೈಸಸ್ ಎನ್ನುವ ಫೈನಾನ್ಸ್ ಹಾಗೂ ಮುನೇಶ್ವರ ಸೌಹಾರ್ದ ಸೊಸೈಟಿ ತೆರೆದು ಸಾರ್ವಜನಿಕರಿಗೆ ದುಬಾರಿ ಬಡ್ಡಿಗೆ ಸಾಲವನ್ನು ನೀಡುತ್ತಿದ್ದ. ಬಡ್ಡಿ ನೀಡದಿದ್ದರೆ, ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments