ಬಡ್ಡಿ ದಂಧೆಕೋರನ ಅರೆಸ್ಟ್: ಪಿಸ್ತೂಲ್ ವಶ

Webdunia
ಗುರುವಾರ, 10 ಜನವರಿ 2019 (18:57 IST)
ದುಬಾರಿ ಬಡ್ಡಿಗೆ ಒತ್ತಾಯ ಮಾಡಿ ಕೊಲೆಗೆ ಯತ್ನಿಸಿದ ಶ್ರೀಹರಿ ಎಂಟರ್ಪ್ರೈಸಸ್ ಮಾಲೀಕ ಉದಯ್ ಶೆಟ್ಟಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಪಿಸ್ತೂಲ್, 4 ಗುಂಡುಗಳು, ಜಿಂಕೆ ಕೊಂಬುಗಳು, ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವಿಲ್ಸನ್ ಗಾರ್ಡನ್ 4ನೇ ಕ್ರಾಸ್ ಉದಯ್ ಗೋಪಾಲ್ ಶೆಟ್ಟಿ (54), ಶ್ರೀಹರಿ ಎಂಟರ್ಪ್ರೈಸಸ್ ನಡೆಸುತ್ತಿದ್ದು, ಬಡ್ಡಿಗೆ ಹಣ ನೀಡುತ್ತಿದ್ದ. ಸಂಜಯ್ ನಗರದ ಅಬ್ದುಲ್ ರೆಹಮಾನ್ ಎಂಬುವವರಿಗೆ ಸಾಲವಾಗಿ ಹಣ ನೀಡಿದ್ದು, ಅಸಲು, ಬಡ್ಡಿಯನ್ನು ತೀರಿಸಿದ್ದರೂ, ದುಬಾರಿ ಬಡ್ಡಿಗೆ ಕಿರುಕುಳ ನೀಡುತ್ತಿದ್ದ.

ದುಬಾರಿ ಬಡ್ಡಿ ನೀಡದಿದ್ದರಿಂದ ಅಬ್ದುಲ್ ರೆಹಮಾನ್ ಅವರ ಮನೆಗೆ ಅಕ್ರಮವಾಗಿ ನುಗ್ಗಿ ಪಿಸ್ತೂಲ್ನಿಂದ ಜೀವ ಬೆದರಿಕೆ ಹಾಕಿದ್ದ. ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತರು, ಸಿಸಿಬಿಗೆ ವರ್ಗಾಯಿಸಿದ್ದರು.

ಸಂಬಂಧ ತನಿಖೆ ತೀವ್ರಗೊಳಿಸಿ, ಉದಯ್ ಗೋಪಾಲ್ ಶೆಟ್ಟಿ ಅವರನ್ನು ಬಂಧಿಸಿ, 5.76 ಸಾವಿರ ನಗದು, ಪಿಸ್ತೂಲ್, 4 ಜೀವಂತ ಗುಂಡುಗಳು, ಖಾಲಿ ಚೆಕ್ಗಳು, ಬಾಂಡ್ ಪೇಪರ್ಗಳು, ಜಮೀನಿನ ದಾಖಲಾತಿಗಳು, ಜೊತೆಗೆ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಆರೋಪಿಯು ಶ್ರೀಹರಿ ಎಂಟರ್ಪ್ರೈಸಸ್ ಎನ್ನುವ ಫೈನಾನ್ಸ್ ಹಾಗೂ ಮುನೇಶ್ವರ ಸೌಹಾರ್ದ ಸೊಸೈಟಿ ತೆರೆದು ಸಾರ್ವಜನಿಕರಿಗೆ ದುಬಾರಿ ಬಡ್ಡಿಗೆ ಸಾಲವನ್ನು ನೀಡುತ್ತಿದ್ದ. ಬಡ್ಡಿ ನೀಡದಿದ್ದರೆ, ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments