Publish Date: Sun, 01 Sep 2019 (19:46 IST)
Updated Date: Sun, 01 Sep 2019 (19:48 IST)
ರಾಜ್ಯ ರಾಜಕಾರಣದಲ್ಲಿ ವಿಚಿತ್ರ ತಿರುವುಗಳು ಪಡೆದುಕೊಳ್ಳುತ್ತಿದ್ದು, ವರ್ಷಾಂತ್ಯಕ್ಕೆ ರಾಜ್ಯದ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುತ್ತೆ.
ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂದಿದ್ದಾರೆ.
ವಿಧಾನಸಭೆ ಚುನಾವಣೆಗಾಗಿ ರಾಜ್ಯದ ಕೈಪಡೆಯ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಬೇಕೆಂದು ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್.ಯಡಿಯೂರಪ್ಪ ಹೆಚ್ಚು ದಿನ ಇರೋದಿಲ್ಲ. ರಾಜ್ಯ ಸರಕಾರ ಈಗಲೂ ಟೇಕಾಫ್ ಆಗಿಲ್ಲ ಎಂದು ದೂರಿದರು.