ಪೊಲೀಸ್ ಠಾಣೆಯ ಸಿಬ್ಬಂದಿ ವಿಚಾರಣೆ

geetha
ಮಂಗಳವಾರ, 9 ಜನವರಿ 2024 (14:21 IST)
ಬೆಂಗಳೂರು-ಅವಧಿ ಮೀರಿ ಬೆಳಗಿನ ಜಾವದವರೆಗೆ ಸಿನಿಮಾ ಸಕ್ಸಸ್ ಪಾರ್ಟಿ ಗೆ ಅವಕಾಶ ನೀಡಿದ ಹಿನ್ನೆಲೆ ಸುಬ್ರಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಂದು ಅಲ್ಲಿ ಏನಾಯಿತು ಎನ್ನುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ನಡೆದ ದಿನ ಮಧ್ಯರಾತ್ರಿ 12.45ಕ್ಕೆ ಜೆಟ್​ಲ್ಯಾಗ್​ಗೆ ಅವತ್ತಿನ ನೈಟ್ ರೌಂಡ್ಸ್ ಇರೋ ಎಸ್​ಐ ಮತ್ತು ಸಿಬ್ಬಂದಿ ಹೋಗಿದ್ದರು. ತಡರಾತ್ರಿ 1:10ಕ್ಕೆ ಎಸ್​ಐ ಜೆಟ್​ಲ್ಯಾಗ್ ರೆಸ್ಟೋಬಾರ್ ಕ್ಲೋಸ್ ಮಾಡಿಸಿದ್ದರು.

ಸ್ಟಾರ್​ಗಳು ಒಳಗಡೆ ಇರೋದೇಕೆ ಎಂದು ಎಸ್​ಐ ಪ್ರಶ್ನೆ ಮಾಡಿದ್ದರು. ಈ ವೇಳೆ ದರ್ಶನ್ ಜೊತೆ ಫೋಟೋಗಾಗಿ ಅಭಿಮಾನಿಗಳು ನಿಂತಿದ್ದರು. ಹೋಗಿ ಕ್ರೌಡ್ ಕ್ಲಿಯರ್ ಮಾಡಿ ದರ್ಶನ್ ಮತ್ತು ಸಹನಟರನ್ನ ಕಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ಜೊತೆಗೆ ಅಂದು ರಾತ್ರಿ ನಡೆದ ಘಟನೆಗಳ ಬಗ್ಗೆ ಪೊಲೀಸ್ ಸಿಬ್ಬಂದಿ ಡೈರಿಯಲ್ಲಿ ಉಲ್ಲೇಖ ಮಾಡಿದ್ದಾರೆ . ಇತ್ತ, ಜೆಟ್​ಲ್ಯಾಗ್ ಮಾಲೀಕರಾದ ಶಶಿರೇಖಾ ಜಗದೀಶ್ ಹೇಳಿಕೆ ನೀಡಿದ್ದು, ನಟ ದರ್ಶನ್ ಸೇರಿ ಎಂಟು ಜನರ ಹೆಸರು ಉಲ್ಲೇಖಿಸಿದ್ದಾರೆ. ಹೀಗಾಗಿ, ಅವರಿಗೆ ನೋಟಿಸ್ ನೀಡಲಾಗಿದೆ. ಸದ್ಯ ನೋಟಿಸ್​ಗೆ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ, ಎರಡನೇ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments