Webdunia - Bharat's app for daily news and videos

Install App

ಬಿಎಂಟಿಸಿ ಯಿಂದ ನಗರದ ಜನತೆಗೆ ನೂತನ ತಂತ್ರಜ್ಞಾನದ ಪರಿಚಯ

Webdunia
ಬುಧವಾರ, 6 ಏಪ್ರಿಲ್ 2022 (18:33 IST)
ನಗರದ ಖಾಸಗಿ ಸಂಸ್ಥೆ ಟುಮೊಕ್‌ ಕಂಪೆನಿಯ ಸಹಭಾಗಿತ್ವದಲ್ಲಿ ಮೊಬೈಲ್‌ ಆ್ಯಪ್‌ ಪರಿಚಯಿಸುತ್ತಿರುವ ಬಿಎಂಟಿಸಿ, ಸ್ಮಾರ್ಟ್‌ಫೋನ್‌ಗಳಲ್ಲೇ ಪಾಸ್​ ವ್ಯವಸ್ಥೆ ಮಾಡಿದೆ.
 
ಬಿಎಂಟಿಸಿ (BMTC) ಪ್ರಯಾಣಿಕರು ಇನ್ಮುಂದೆ ಪಾಸ್​ ಪಡೆಯಲು ಬಸ್ ನಿಲ್ದಾಣಗಳಲ್ಲಿ ಕ್ಯೂ ನಿಲ್ಲೋದು ತಪ್ಪಲಿದೆ. ಇನ್ನು ಮುಂದೆ ಪಾಸ್‌ ಖರೀದಿಸುವ ಬದಲಾಗಿ ಮೊಬೈಲ್‌ ಫೋನ್‌ನ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ (QR code scan) ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ ಕಲ್ಪಿಸಿದೆ. ಬಿಎಂಟಿಸಿ ನಗರದ ಪ್ರಯಾಣಿಕರಿಗಾಗಿ ನೂತನ ತಂತ್ರಜ್ಞಾನ (New Technology) ಪರಿಚಯಿಸಿದೆ. ನಗರದ ಖಾಸಗಿ ಸಂಸ್ಥೆ ಟುಮೊಕ್‌ ಕಂಪೆನಿಯ ಸಹಭಾಗಿತ್ವದಲ್ಲಿ ಮೊಬೈಲ್‌ ಆ್ಯಪ್ ‌(Mobile App) ಪರಿಚಯಿಸುತ್ತಿರುವ ಬಿಎಂಟಿಸಿ, ಸ್ಮಾರ್ಟ್‌ಫೋನ್‌ಗಳಲ್ಲೇ (Smartphone) ಟುಮೊಕ್‌ ಸಂಸ್ಥೆಯ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ದಿನದ ಮತ್ತು ವಾರದ ಹಾಗೂ ಮಾಸಿಕ ಪಾಸುಗಳನ್ನು ಪಡೆಯಲು ಅವಕಾಶ ನೀಡಿದೆ.
 
ಮೊಬೈಲ್‌ ಆ್ಯಪ್‌ನನ್ನು ಬಸ್‌ನ ನಿರ್ವಾಹಕರ ಬಳಿಯ ಎಲೆಕ್ಟ್ರಾನಿಕ್‌ ಟಿಕೆಟ್‌ ಮಿಷನ್‌(ETM)ನಲ್ಲಿ ಸ್ಕ್ಯಾನ್‌ ಮಾಡಿ ಪ್ರಯಾಣಿಬಹುದಾಗಿದೆ. ಇದರಿಂದ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ಪಾಸ್‌ ಖರೀದಿಸುವ ಅಗತ್ಯವಿಲ್ಲವಾಗಲಿದೆ. ಇಷ್ಟು ದಿನ ಪೇಪರ್​ ರೂಪದಲ್ಲಿ ಬಿಎಂಟಿಸಿ ಬಸ್​ ನೀಡಲಾಗ್ತಿತ್ತು. ಇದೀಗ ಪಾಸ್​ ನನ್ನು ಮೊಬೈಲ್​ನಲ್ಲೇ ಕ್ಯೂಆರ್​ ಕೋಡ್​ ಸ್ಕ್ಯಾನ್​ ಮಾಡ್ಬಹುದು.
 
 
ಬಸ್​ಗಳಲ್ಲಿ ಕ್ಯೂಆರ್​ ಕೋಡ್​ ವ್ಯವಸ್ಥೆ ಹೇಗಿದೆ?
 
 
ವೊಲ್ವೋ ಬಸ್‌ಗಳ ನಿರ್ವಾಹಕರಿಗೆ ಇಟಿಎಂ ಮಿಷನ್‌ಗಳಿರಲಿದ್ದು, ಅದರಲ್ಲಿ ಮೊಬೈಲ್‌ನಲ್ಲಿನ ಕ್ಯೂಆರ್‌ಕೋಡ್‌ ಸ್ಕ್ಯಾನ್‌(QRCode Scan) ಮಾಡಬಹುದಾಗಿದೆ. ಆದರೆ, ಸಾಮಾನ್ಯ ಬಸ್‌ಗಳಲ್ಲಿ ನಿರ್ವಾಹಕರ ಬಳಿ ಇರುವ ಕ್ಯುಆರ್‌ ಕೋಡ್‌ ಅನ್ನು ಸ್ಕ್ಯಾನ್‌ ಮಾಡಿ ಪ್ರಯಾಣಿಸಬಹುದಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಎಲ್ಲ ವೋಲ್ವೋ ಬಸ್‌ಗಳು ಹಾಗೂ ಸುಮಾರು 200 ಸಾಮಾನ್ಯ ಬಸ್‌ಗಳಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಎಂದು ಬಿಎಂಟಿಸಿ ನಿರ್ದೇಶಕ(ಐಟಿ) ಸೂರ್ಯಸೇನ್‌ ಮಾಹಿತಿ ನೀಡಿದರು.
 
ಪಾಸ್​ಗಾಗಿ ಕ್ಯೂನಲ್ಲಿ ನಿಲ್ಲೋದು ತಪ್ಪುತ್ತೆ
 
 
ಈ ವ್ಯವಸ್ಥೆಯಿಂದ ಮುಖ್ಯವಾಗಿ ಪ್ರಯಾಣಿಕರಿಗೆ ಸಾಕಷ್ಟುಸಮಯ ಉಳಿತಾಯ ಆಗಲಿದೆ. ಪ್ರತಿ ತಿಂಗಳು ಸರದಿಯಲ್ಲಿ ನಿಂತು ಪಾಸು ಪಡೆಯುವ ಗೋಜು ತಪ್ಪಲಿದೆ. ನಗದು ವಹಿವಾಟು ಇರುವುದಿಲ್ಲ. ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆ ಇರುವುದಿಲ್ಲ. ಭವಿಷ್ಯದಲ್ಲಿ ಟಿಕೆಟ್‌ ವಿತರಣಾ ವ್ಯವಸ್ಥೆಗೂ ಇದು ವಿಸ್ತರಣೆಯಾದರೆ, ಆದಾಯ ಸೋರಿಕೆಗೆ ಬ್ರೇಕ್‌ ಬೀಳಲಿದೆ ಎಂದು ಬಿಎಂಟಿಸಿ ನಿರ್ದೇಶಕ (ಐಟಿ) ಸೂರ್ಯಸೇನ್‌ ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments