Select Your Language

Notifications

webdunia
webdunia
webdunia
webdunia

ಪ್ರತ್ಯಕ್ಷವಾದ ಹುಲಿ: ಆತಂಕದಲ್ಲಿ ಗ್ರಾಮಸ್ಥರು

ಪ್ರತ್ಯಕ್ಷವಾದ ಹುಲಿ: ಆತಂಕದಲ್ಲಿ ಗ್ರಾಮಸ್ಥರು
ಕೊಡಗು , ಮಂಗಳವಾರ, 3 ಜುಲೈ 2018 (18:57 IST)
ರೈತರಿಗೆ ಸೇರಿದ ಎರಡು ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ತಿಂದಿದೆ. ಏಕಾಏಕಿಯಾಗಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಹುಲಿಯಿಂದ ಆ ಪ್ರದೇಶದ ಜನರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. 
 
ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮಿತಿಮೀರುತ್ತಿವೆ. ಹುಲಿ ದಾಳಿಗೆ ಮತ್ತೆರಡು ಜಾನುವಾರುಗಳು ಬಲಿಯಾಗಿವೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಚಿಕ್ಲಿ ಹೊಳೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಲ್ಲದೇ ಶುಂಠಿಕೊಪ್ಪ ವ್ಯಾಪ್ತಿಯಲ್ಲಿಯೂ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜಾನುವಾರು ಬಲಿ ಪಡೆದ ಚಿತ್ರಣ ಅರಣ್ಯ ಇಲಾಖೆ ಅಳವಡಿಸಿರುವ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಅಷ್ಟೇ ಅಲ್ಲ ಚಿಕ್ಲಿಹೊಳೆ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಪ್ರವಾಸಿಗರ ಕಣ್ಣಿಗೆ ಕೂಡ ಹುಲಿ ಕಂಡುಬಂದಿದೆ. 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಲವ್ ಕ್ಯಾಸ್ಟ್ ದೋಖಾ...