Webdunia - Bharat's app for daily news and videos

Install App

ಎಲ್ಲ ಆಯಾಮಗಳಲ್ಲಿ ತನಿಖೆ ಆಗುತ್ತಿದೆ-ಬಿಬಿಎಂಪಿ ಚೀಫ್‌ ಕಮಿಷನರ್ ತುಷಾರ್ ಗಿರಿನಾಥ್

Webdunia
ಭಾನುವಾರ, 13 ಆಗಸ್ಟ್ 2023 (14:00 IST)
ಅಗ್ನಿ ಅವಘಡ ದುರಂತ ಘಟನೆ ಸಂಬಂಧ ಪೊಲೀಸರಿಗೆ ದೂರು ಬಿಬಿಎಂಪಿ ಚೀಫ್‌ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ.ದೂರಿನ ಅನ್ವಯ ವಿಚಾರಣೆ ನಡೆಯುತ್ತಿದೆ.ಎಲ್ಲ ಆಯಾಮಗಳಲ್ಲಿ ತನಿಖೆ ಆಗುತ್ತಿದೆ.ತನಿಖೆಗೆ ನಮ್ಮ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ.ಲ್ಯಾಬ್ ನಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.ಇನ್ನಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ರು.
 
ಇನ್ನೂ ಲ್ಯಾಬ್ ಹೊರಗಡೆ ಆಂಬುಲೆನ್ಸ್ ಇರಬೇಕಿತ್ತಲ್ಲವೇ ಎಂಬ ಪ್ರಶ್ನೆಗೆ ಸರಿಯಾಗಿ ಕಮಿಷನರ್ ಸ್ಪಂದಿಸಿಲ್ಲ.ಡಿ ಗ್ರೂಪ್ ನೌಕರ ಲ್ಯಾಬ್ ನಲ್ಲಿ ಸಹಾಯ ಮಾಡಬಹುದುಆದ್ರೆ ಎಲ್ಲ ಕೆಲಸ ಅವರೇ ಮಾಡುವಂತಿಲ್ಲ.ಈ ಕುರಿತು ಆಂತರಿಕ ತನಿಖೆಗೆ ಇಂಜಿನಿಯರ್ ಇನ್ ಚೀಫ್ ಪ್ರಹ್ಲಾದ್ ಅವರಿಗೆ ವಹಿಸಲಾಗಿದೆ.ಅವರು ಇಡೀ ಪ್ರಕರಣದ ಆಂತರಿಕ ವರದಿಯನ್ನ ನೀಡಲಿದ್ದಾರೆ.ವರದಿ ಕೊಟ್ಟ ನಂತರ ಡಿಸಿಎಂ, ಸಿಎಂಗೆ ಕಳುಹಿಸಲಾಗುವುದು.ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆಅಗ್ನಿ ಅವಘಡದಲ್ಲಿ ಒಂಬತ್ತು ಜನರಲ್ಲಿ 6 ಜನರಿಗೆ ಯಾವುದೇ ಅಪಾಯ ಇಲ್ಲ.ಇನ್ನುಳಿದ ಮೂವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.ಬಿಬಿಎಂಪಿ ವತಿಯಿಂದಲೇ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ.ಮುಖ ಸುಟ್ಟವರಿಗೆ ಸರ್ಜರಿ ಮಾಡಿಸಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಮುಂದಿನ ಸುದ್ದಿ
Show comments