Webdunia - Bharat's app for daily news and videos

Install App

ಶಿರೂರು ಮೂಲಮಠದಲ್ಲಿ ಎಸ್ ಪಿ ಯಿಂದ ತನಿಖೆ

Webdunia
ಮಂಗಳವಾರ, 24 ಜುಲೈ 2018 (14:09 IST)
ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ  ಹಿರಿಯಡ್ಕ ಸಮೀಪದಲ್ಲಿರುವ ಶಿರೂರು ಮೂಲ ಮಠಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.

ಸ್ವಾಮೀಜಿ ಸಾವಿನ ಪ್ರಕರಣದ ತನಿಖೆಯು ಎಸ್ಪಿ ನಿರ್ದೇಶನದಲ್ಲಿ ಮುಂದುವರೆಯುತ್ತಿದ್ದು, ಹಿನ್ನೆಲೆಯಲ್ಲಿ ಅವರು ಮೂಲಮಠಕ್ಕೆ ಭೇಟಿ ನೀಡಿದ್ದಾರೆನ್ನಲಾಗಿದೆ. ಮಠದ ಕೆಲವೊಂದು ಕೋಣೆಗಳಿಗೆ ತೆರಳಿ ಪರಿಶೀಲನೆ ನಡೆಸಿರುವ ಎಸ್ಪಿ, ಸಿಸಿ ಕ್ಯಾಮೆರಾ ಹಾಗೂ ಡಿವಿಆರ್ ಸಂಬಂಧ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ ಮಠಕ್ಕೆ ಸಂಬಂಧಿಸಿದವರನ್ನು ಕೂಡ ಅವರು ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 
ಎಸ್ ಪಿ ಹೇಳಿದ್ದೇನು?
ಶಿರೂರು ಸ್ವಾಮೀಜಿಗೆ ಮಹಿಳೆಯೊಬ್ಬರು ವಿಷ ಉಣಿಸಿ ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು, ನಾವು ಈವರೆಗೆ ಯಾವುದೇ ಮಹಿಳೆಯನ್ನು ವಶಕ್ಕೆ ತೆಗೆದುಕೊಂಡಿಲ್ಲ ಹಾಗೂ ವಿಚಾರಣೆ ಮಾಡಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.

ಶಿರೂರು ಮೂಲ ಮಠದಲ್ಲಿರುವ ಸಿಸಿ ಕ್ಯಾಮೆರಾದ ಡಿವಿಆರ್ ನಾಪತ್ತೆಯಾಗಿರುವ ವಿಚಾರವನ್ನು ನಿರಾಕರಿಸಿರುವ ಎಸ್ಪಿ ಲಕ್ಷ್ಮಣ ನಿಂಬರಗಿ, ಸ್ವಾಮೀಜಿಯ ಸಾವಿಗೆ ಸಂಬಂಧಿಸಿ ಹರಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments